ಶಿವಮೊಗ್ಗ: ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು.
ಗುರುವಾರ ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿ, ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಲ್ಲಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಿಗೆ ದಂಡವನ್ನು ಪಾವತಿಸಲು ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಸೆ.12 ರವರೆಗೆ ಈ ರಿಯಾಯಿತಿ ಅನ್ವಯಿಸುತ್ತದೆ. ಆದ್ದರಿಂದ ಬಾಕಿ ಉಳಿಸಿಕೊಂಡಿರುವವರು ಕೂಡಲೇ ಈ ಅವಕಾಶವನ್ನು ಬಳಕೆ ಮಾಡಿಳ್ಳಬೇಕೆಂದರು.
ಪೊಲೀಸ್ ಇಲಾಖೆಯಿಂದ ಆ.23 ರಿಂದ ಸೆ.02 ರವರೆಗೆ ಈ ರಿಯಾಯಿತಿಯಡಿ ಒಟ್ಟು 15,465 ಇ-ಚಲನ್ ಪ್ರಕರಣಗಳನ್ನು ರೂ.63,22,750/- ಮೊತ್ತ ಪಾವತಿಸಿ ಮುಕ್ತಾಯ ಮಾಡಲಾಗಿದೆ. ಇಂದಿನಿAದ ಇನ್ನು ಒಂಭತ್ತು ದಿನಗಳ ಕಾಲದವರೆಗೆ ಮಾತ್ರ ಈ ಅವಕಾಶವಿದ್ದು ಸಾರ್ವಜನಿಕರು ತಮ್ಮ ವಾಹನಗಳ ಮೇಲೆ ಪೊಲೀಸರಿಂದ ನೋಂದಾಯಿಸಲ್ಪಟ್ಟ ದಂಡವನ್ನು ಶೀಘ್ರವಾಗಿ ಪಾವತಿಸುವಂತೆ ಅವರು ತಿಳಿಸಿದರು.
ರಾಷ್ಟಿçÃಯ ಲೋಕ್ ಅದಾಲತ್: ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಶೀಘ್ರ ವಿಲೇವಾರಿಗೆ ಮತ್ತು ಪಕ್ಷಗಾರರಿಗೆ ತ್ವರಿತ ನ್ಯಾಯ ದಾನದ ದೃಷ್ಟಿಯಿಂದ ಈ ವರ್ಷದ 3ನೇ ರಾಷ್ಟಿçÃಯ ಲೋಕ್ ಅದಾಲತ್ನ್ನು ದಿನಾಂಕ: 13.09.2025 ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾದದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜೀ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ ಉಭಯ ಪಕ್ಷಗಾರರ ಉಪಸ್ಥಿತಿಯಲ್ಲಿ ನ್ಯಾಯಾಧೀಶರು ಮತ್ತು ನ್ಯಾಯಿಕೇತರ ಸಂಧಾನಕಾರರು ರಾಜೀ ಸಂಧಾನದ ಪ್ರಕ್ರಿಯೆಯನ್ನು ಕೈಗೊಂಡು ಪಕ್ಷಗಾರರು ವಿವಾದವನ್ನು ಇತ್ಯರ್ಥಪಡಿಸಿಕೊಂಡರೆ ಅದರಂತೆ ಅಂತಿಮ ಆದೇಶವನ್ನು ಅದೇ ದಿನದಂದು ನೀಡುವ ಅವಕಾಶವನ್ನು ಸಾರ್ವಜನಿಕರು ಮತ್ತು ಪಕ್ಷಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಈ ಮೂಲಕ ಮನವಿ ಮಾಡಿದರು.
ಈ ಮುಂಚೆ ದಿನಾಂಕ: 12.07.2025 ರಂದು ಕೈಗೊಳ್ಳಲಾದ ಈ ವರ್ಷದ 2ನೇ ರಾಪ್ಟ್ರೀಯ ಲೋಕ್ ಅದಾಲತ್ನಲ್ಲಿ ವಿಚಾರಣೆಗೆ ಬಾಕಿ ಇದ್ದ 14225 ರಷ್ಟು ಪ್ರಕರಣಗಳು ರಾಜೀ ಸಂಧಾನದ ಮೂಲಕ ಕೊನೆಗೊಂಡಿದ್ದು, ಅವುಗಳ ಮೂಲಕ ಪಕ್ಷಗಾರರು ಒಟ್ಟು ರೂ. 30,50,15,387/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಲಾಗಿರುತ್ತದೆ. ಅದೇ ಸಂದರ್ಭದಲ್ಲಿ ಒಟ್ಟು 1,44,825 ವ್ಯಾಜ್ಯ ಪೂರ್ವ ಪ್ರಕರಣಗಳು ಕೊನೆಗೊಂಡಿದ್ದು, ಅವುಗಳ ಮೂಲಕ ಒಟ್ಟು ರೂ. 75,40,80,831/- ಮೊತ್ತದ ಪರಿಹಾರ ಒಳಗೊಂಡ ವಿವಾದಗಳನ್ನು ರಾಜೀ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದರು.
ರಾಷ್ಟçಕ್ಕಾಗಿ ಮಧ್ಯಸ್ಥಿಕೆ – 90 ದಿನಗಳ ಮಧ್ಯಸ್ಥಿಕೆ ಅಭಿಯಾನ :
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ಶಿವಮೊಗ್ಗ ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ವೈವಾಹಿಕ ವಿವಾಹದ ವ್ಯಾಜ್ಯಗಳು, ಅಪಘಾತಕ್ಕೆ ಸಂಬAಧಿಸಿದ ಪರಿಹಾರದ ವ್ಯಾಜ್ಯಗಳು, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ವಿವಾದದ ದಾವೆಗಳು, ವೇತನ ಮತ್ತು ಸೇವೆಗೆ ಸಂಬAಧಿಸಿದ ವ್ಯಾಜ್ಯಗಳು, ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಗ್ರಾಹಕರ ವೇದಿಕೆಯ ಪ್ರಕರಣಗಳು, ಸಾಲದ ಪ್ರಕರಣಗಳು, ಪಾಲು ವಿಭಾಗದ ದಾವೆಗಳು, ಸ್ಥಿರ ಆಸ್ತಿ ಸ್ವಾಧೀನದ ದಾವೆಗಳು, ಭೂಸ್ವಾಧೀನದ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳ ರಾಜೀ ಸಂಧಾನಕ್ಕಾಗಿ 90 ದಿನಗಳ ಮಧ್ಯಸ್ಥಿಕೆ ಅಭಿಯಾನವನ್ನು ದಿನಾಂಕ: 01.07.2025 ರಿಂದ 30.09.2025 ರವರೆಗೆ ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಪಕ್ಷಗಾರರು ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಶೀಘ್ರವಾಗಿ ಮತ್ತು ತಮಗೆ ಸೂಕ್ತ ಎನ್ನಿಸುವ ನ್ಯಾಯಯುತವಾದ ಪರಿಹಾರಗಳನ್ನು ಪಡೆದುಕೊಳ್ಳಲು ಸಂಬAಧಪಟ್ಟ ನ್ಯಾಯಾಲಯಗಳಲ್ಲಿ ಅಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ನೇಮಿಸಲು ತಾವಾಗಲೀ ಅಥವಾ ವಕೀಲರ ಮೂಲಕ ಮನವಿ ಮಾಡಿಕೊಂಡು ಅದರಂತೆ ಮಧ್ಯಸ್ಥಿಕೆ ಪ್ರಕರಣಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲೆಯ ಎಲ್ಲಾ ಕಾನೂನು ಸೇವಾ ಸಮಿತಿಯಲ್ಲಿ ಮಧ್ಯಸ್ಥಿಕೆದಾರರಾಗಿ ಸೇವೆ ಸಲ್ಲಿಸುತ್ತಿರುವ ನುರಿಯ ಹಿರಿಯ ನ್ಯಾಯವಾದಿಗಳ ಸಹಾಯದಿಂದ ಪ್ರಕರಣಗಳಲ್ಲಿ ನ್ಯಾಯ ಪಡೆದುಕೊಳ್ಳಬಹುದು.
ಈವರೆಗೆ 1420 ಪ್ರಕರಣಗಳನ್ನು ಮಧ್ಯಸ್ಥಿಕೆಗಾಗಿ ಗುರುತಿಸಿದ್ದು, 112 ಪ್ರಕರಣಗಳನ್ನು ಯಶಸ್ವಿಯಾಗಿ ರಾಜೀ ಮೂಲಕ ಬಗೆಹರಿಸಲಾಗಿದೆ ಎಂದರು.
ಖಾಯA ಲೋಕ್ ಅದಾಲತ್ ಜಾಗೃತಿ ಅಭಿಯಾನ : ಸಾರ್ವಜನಿಕ ಉಪಯುಕ್ತ ಸೇವೆಗಳನ್ನು ನೀಡುತ್ತಿರುವ ಬ್ಯಾಂಕ್ಗಳು, ವಿಮಾ ಕಂಪನಿಗಳು, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಲ್ಲಿ ಖಾಯಂ ಲೋಕ್ ಅದಾಲತ್ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಖಾಯಂ ಲೋಕ್ ಅದಾಲತ್ ಒಂದು ವಿಶೇಷ ನ್ಯಾಯಾಲಯವಾಗಿದ್ದು, ಪ್ರಕರಣಗಳ ರಾಜೀ ಸಂಧಾನವೇ ಈ ನ್ಯಾಯಾಲಯದ ಮೊದಲ ಆದ್ಯತೆಯಾಗಿದೆ. ಪ್ರಯಾಣಿಕರನ್ನು ಅಥವಾ ಸರಕನ್ನು ಸಾಗಿಸುವ ಭೂ ಸಾರಿಗೆ, ಜಲಸಾರಿಗೆ, ವಾಯು ಸಾರಿಗೆ ಸೇವೆಗಳು, ಅಂಚೆ ತಂತಿ, ದೂರವಾಣಿ ಸೇವೆಗಳು, ವಿದ್ಯುತ್, ನೀರು ಸರಬರಾಜು, ಸಾರ್ವಜನಿಕ ನೈರ್ಮಲ್ಯ ಹಾಗೂ ಚರಂಡಿ ವ್ಯವಸ್ಥೆ, ವಿಮಾ ಸೇವೆ, ಆಸ್ಪತ್ರೆ ಹಾಗೂ ಔಷಧಾಲಯಗಳ ಸೇವೆ, ಹಣಕಾಸು ಸಂಸ್ಥೆ ಹಾಗೂ ಬ್ಯಾಂಕ್ ಸೇವೆ, ಶಿಕ್ಷಣ ಸಂಸ್ಥೆಗಳ ಸಂಬAಧಪಟ್ಟ ಸೇವೆ, ಗೃಹ ಹಾಗೂ ರಿಯಲ್ ಎಸ್ಟೇಟ್ ಸೇವೆ ಒಳಗೊಂಡAತೆ ಇನ್ನಿತರ ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳನ್ನು ಈ ನ್ಯಾಯಾಲಯದಲ್ಲಿ ಸಲ್ಲಿಸಬಹುದು. ಇತರೆ ನ್ಯಾಯಾಲಯಗಳಂತೆ ಇಲ್ಲಿ ಶುಲ್ಕ ಕಟ್ಟುವಂತಿಲ್ಲ ಹಾಗೂ ಯಾವುದೇ ಆದಾಯದ ಮಿತಿ ಇರುವುದಿಲ್ಲ. ಈ ಖಾಯಂ ಲೋಕ್ ಅದಾಲತ್ ರಾಜ್ಯದ 6 ಜಿಲ್ಲೆಗಳಲ್ಲಿ ಕಚೇರಿ ಹೊಂದಿದ್ದು ಶಿವಮೊಗ್ಗ ಜಿಲ್ಲೆಯು ಮಂಗಳೂರಿನ ವ್ಯಾಪ್ತಿಗೆ ಬರುತ್ತದೆ. ಮುಂದಿನ ದಿನಗಳಲ್ಲಿ ಮಂಗಳೂರಿನ ಪೀಠವು ನಿಯಮಿತವಾಗಿ ಶಿವಮೊಗ್ಗಕ್ಕೆ ಬಂದು ಅದಾಲತ್ ನಡೆಸಲಿದೆ ಎಂದು ಮಾಹಿತಿ ನೀಡಿದರು.
ಖಾಯಂ ಜನತಾ ನ್ಯಾಯಾಲಯದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧ್ಯಕ್ಷರಾಗಿ ಹಾಘೂ ಇಬ್ಬರು ಸದಸ್ಯರು ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಿದಂತೆ ಕರ್ತವ್ಯ ನಿರ್ವಹಿಸುತ್ತಾರೆ. ರೂ.1 ಕೋಟಿ ಮೌಲ್ಯದ ವ್ಯಾಜ್ಯಗಳನ್ನು ಅಥವಾ ಹಣಕಾಸಿನ ವ್ಯವಹಾರ ಪ್ರಕರಣಗಳನ್ನು ದಾಖಲಿಸಬಹುದು. ಅರ್ಜಿದಾರರಿಗೆ ಯಾವುದೇ ಆದಾಯ ಮಿತಿ ಇರುವುದಿಲ್ಲ ಹಾಗೂ ನ್ಯಾಯಾಲಯದ ಶುಲ್ಕವಿರುವುದಿಲ್ಲ. ಖಾಯಂ ಜನತಾ ನ್ಯಾಯಾಲಯದಲ್ಲಿ ನೀಡಿದ ಐತೀರ್ಪು ಅವಾರ್ಡ್ನ್ನು ಯಾವುದೇ ಸಿವಿಲ್ ಅಥವಾ ಜಿಲ್ಲಾ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವಿಲ್ಲ.
ನಾಲ್ಸಾ ಕಾನೂನು ಉಚಿತ ಸಹಾಯ ವಾಣಿ 15100 : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ನವದೆಹಲಿಯ ಸೂಚನೆಯಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿವಮೊಗ್ಗ ವತಿಯಿಂದ ಒಬ್ಬ ಮಹಿಳಾ ವಕೀಲರು ಹಾಗೂ ಒಬ್ಬ ಪುರುಷ ವಕೀಲರನ್ನು ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಬರುವ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಕುಂದು ಕೊರತೆಗೆ ಉಚಿತ ಕಾನೂನು ಸಲಹೆ ನೀಡಲು ನೇಮಿಸಲಾಗಿದ್ದು, ಸಾರ್ವಜನಿಕರು ಈ ಉಚಿತ ಸಹಾಯವಾಣಿ ಸಂಖ್ಯೆ ಕರೆ ಮಾಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಹೊರತುಪಡಿಸಿ ಉಳಿದಂತೆ ತಮಗೆ ಅವಶ್ಯಕವಿರುವ ತುರ್ತು ಕಾನೂನು ಸಲಹೆಯನ್ನು ಪಡೆದುಕೊಳ್ಳಬಹುದೆಂದರು.
ಪತ್ರಿಕಾಗೋಷ್ಟಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ಹಾಜರಿದ್ದರು.