Wednesday, May 21, 2025
Google search engine

Homeರಾಜ್ಯಸುದ್ದಿಜಾಲಇಂದು ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕೆಆರ್‌ಎಸ್ ಬೃಂದಾವನದಲ್ಲಿ ಸಕಲ ಸಿದ್ದತೆ

ಇಂದು ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಕೆಆರ್‌ಎಸ್ ಬೃಂದಾವನದಲ್ಲಿ ಸಕಲ ಸಿದ್ದತೆ

ಶ್ರೀರಂಗಪಟ್ಟಣ:ಕೆಆರ್‌ಎಸ್‌ನಲ್ಲಿ ಇಂದು ಜೂನ್ ೨೧ರಂದು ನಡೆಯುವ ಯೋಗ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಯನ್ನು ಜಿಲ್ಲಾಡಳಿತ ಮಾಡಿಕೊಂಡಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಆಯುಷ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜೂನ್ ೨೧ ರಂದು ಬೆಳಿಗ್ಗೆ ೬:೩೦ ರಿಂದ ೮ ಗಂಟೆಯವರೆಗೆ ಕೆಆರ್‌ಎಸ್ ಬಂದಾವನ ಗಾರ್ಡನ್ ನಲ್ಲಿ ೯ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಕೆಆರ್‌ಎಸ್ ಬೃಂದಾವನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು,ಈಗಾಗಲೇ ಬೃಂದಾವನದ ಒಳಗೆ ಇರುವ ಉದ್ಯಾನವನದ ಬಳಿ ವೇದಿಕೆ ಸಿದ್ದತೆ ಮಾಡಲಾಗಿದ್ದು,ವಿವಿದೆಡೆಯಿಂದ
ಎರಡು ಸಾವಿರಕ್ಕೂ ಹೆಚ್ಚು ಮಂದಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮ ಉದ್ಘಾಟನೆ. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಹಾಗೂ ಬೇಬಿಮಠ ಮತ್ತು ಚಂದ್ರವನ ಆಶ್ರಮದ ಪೀಠಾಧಿಪತಿಗಳಾದ ಡಾ.ಶ್ರೀ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯ
ಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಬಿ ರಮೇಶ್ ಬಂಡಿಸಿದ್ದೇಗೌಡ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಸುಮಲತಾ ಅಂಬರೀಶ, ವಿಧಾನ ಪರಿಷತ್ ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ. ಮಾದೇಗೌಡ,ದಿನೇಶ್ ಗೂಳಿಗೌಡ, ವಿಧಾನಸಭಾ ಶಾಸಕರುಗಳಾದ ಪಿ.ಎಂ ನರೇಂದ್ರಸ್ವಾಮಿ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಹೆಚ್ ಟಿ ಮಂಜು, ಕೆ.ಎಂ ಉದಯ, ಕೆ.ಆರ್ ಎಸ್ ಗ್ರಾಮ ಪಂಚಾಯತಿ ಅಧ್ಯಕ್ಷ ಕೆ.ನರಸಿಂಹ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಪಿ.ಸಿ ಜಾಫರ್ ಭಾಗವಹಿಸಲಿದ್ದಾರೆ.
ಯೋಗ ಮಾಡಲು ಆಗಮಿಸುವ ಯೋಗ ಪಟುಗಳಿಗೆ ಬೃಂದಾವನದ ಬಳಿಯಲ್ಲಿ ಲಘು ಉಪಹಾರ ಹಾಗೂ ನೀರು ನೀಡಲಾಗುತ್ತದೆ . ಯೋಗ ಮಾಡಲು ಆಗಮಿಸುವರು ಮ್ಯಾಟ್ ಜೊತೆಯಲ್ಲಿ ತರಬೇಕು ಜೊತೆಗೆ ಬಿಳಿ ಪ್ಯಾಂಟು ಬನಿಯನ್ ಧರಿಸಿ ಬರಲು ತಹಶೀಲ್ದಾರ್ ಅಶ್ವಿನಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular