Tuesday, April 7, 2026
Google search engine

Homeಸ್ಥಳೀಯಕಲಾಮಂದಿರದಲ್ಲಿ ಶಂಕರಾಚಾರ್ಯ ಜಯಂತಿಗೆ ಸಿದ್ಧತೆ

ಕಲಾಮಂದಿರದಲ್ಲಿ ಶಂಕರಾಚಾರ್ಯ ಜಯಂತಿಗೆ ಸಿದ್ಧತೆ

ಮೈಸೂರು : ಏಪ್ರಿಲ್ 21,ರಂದು ಅರ್ಥಪೂರ್ಣವಾಗಿ ಶ್ರೀ ಶಂಕರಾಚಾರ್ಯ ಅವರ ಜಯಂತಿಯನ್ನು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗಳಾದ ಡಾ ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ,ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು.

ಶಂಕರಾಚಾರ್ಯರು 36ನೇ ವಯಸ್ಸಿಗೆ ದೇಹವನ್ನು ತ್ಯಜಿಸಿದರು. ಅಷ್ಟರಲ್ಲಿ ಆಗಲೇ ಅವರು ಒಂದು ವ್ಯಕ್ತಿತ್ವವನ್ನು ರೂಪಿಸಿದರು. ಅವರ ಎಲ್ಲಾ ಅಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಾಗಾಗಿ ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ನೀಡಲು ಜಯಂತಿಗಳನ್ನು ಆಚರಣೆ ಮಾಡುತ್ತಿದ್ದೇವೆ. ಭಾರತವು ಆಧ್ಯಾತ್ಮಿಕತೆ ಹಾಗೂ ಯೋಗದಲ್ಲಿ ವಿಶ್ವಗುರು ಎಂದು ಎನಿಸಿಕೊಂಡಿದೆ ಎಂದು ತಿಳಿಸಿದರು.

ಶ್ರೀ ಶಂಕರಾಚಾರ್ಯ ಜಯಂತಿಯನ್ನು ಏಪ್ರಿಲ್ 21..ರಂದು ಬೆಳಗ್ಗೆ 11:30 ಗಂಟೆಗೆ ಕಲಾಮಂದಿರದ ಕಿರುರಂಗ ಮಂದಿರದಲ್ಲಿ ಆಚರಣೆ ಮಾಡಲಾಗುವುದು.ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿ ಯನ್ನು ಆಹ್ವಾನಿಸಲಾಗುವುದು ಎಂದರು.

ಜಯoತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಮಹನೀಯರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯ ಮೇಲೆ ಗಣ್ಯರಿಗೆ ಬೊಕ್ಕೆಗಳನ್ನು ನೀಡಿ ಸ್ವಾಗತ ಮಾಡುವ ಬದಲು ಆಯಾ ಜಯಂತಿಗಳಲ್ಲಿ ಆ ಮಹನೀಯರ ಜೀವನ ಚರಿತ್ರೆ ಕುರಿತ ಪುಸ್ತಕಗಳನ್ನು ನೀಡಿ ಸ್ವಾಗತ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ವಿವಿಧ ಜಯಂತಿಗಳ ಆಚರಣೆ ಮಾಡುವಾಗ ಮೈಸೂರು ನಗರದಲ್ಲಿ ಇರುವ ಎಲ್ಲಾ ಮಹನೀಯರ ಪ್ರತಿಮೆಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸ್ವಚ್ಛ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಡಿ ಎಂ ಸುದರ್ಶನ್ ಅವರು ಮಾತನಾಡಿ ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದ ಕಿರುರಂಗಮoದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸಮುದಾಯದ ಮುಖಂಡರು ಮಾತನಾಡಿ ತಮ್ಮ ತಮ್ಮ ಜಯಂತಿಗಳ ಆಚರಣೆಯ ದಿವ್ಯ ಸಾನಿಧ್ಯಕ್ಕೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೆಸರನ್ನು ಆಯ್ಕೆ ಮಾಡಿ ಒಂದೆರಡು ದಿನಗಳಲ್ಲಿ ನೀಡಲಾಗುವುದು. ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಆಯ್ಕೆ ಮಾಡಿ ಹೆಸರನ್ನು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶ್ರೀ ಶಂಕರಾಚಾರ್ಯ ಜಯಂತಿಯ ಆಚರಣೆಯ ಸಂಬoಧ ಮುಖಂಡರುಗಳಾದ ಮಾಜಿ ಮೇಯರ್ ಪುರುಷೋತ್ತಮ್, ಅಹಿಂದ ಜವರಪ್ಪ, ಸೋಮಯ್ಯ ಮಲೆಯೂರು ಅಜಯ್ ಶಾಸ್ತ್ರಿ, ಸುಚೀಂದ್ರ, ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular