ಚಾಮರಾಜನಗರ : ನಿನ್ನೆ ಮೈಸೂರು ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ ಸಿದ್ದರಾಮಯ್ಯ ಇಂದು ಚಾಮರಾಜನಗರ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಬೆಳಿಗ್ಗೆ 11.30ಕ್ಕೆ 475 ಕೋಟಿ ರೂ.ವೆಚ್ಚದ 110 ಕೆರೆ ತುಂಬಿಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಾಗೆಯೇ ಸಂತ್ರಸ್ತರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.
ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಸಿ ಮಹದೇವಪ್ಪ, ಶ್ರೀವಾನಂದ ಪಾಟೀಲ್ ಉಪಸ್ಥಿತರಿರುವ ಸಾಧ್ಯತೆ ಇದೆ.



