ನವದೆಹಲಿ: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ದೇಶದಲ್ಲಿ ತೈಲ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಹಿನ್ನೆಲೆ ಜನರು ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಎಣ್ಣೆಯನ್ನು ಮಿತವಾಗಿ ಬಳಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಅಡುಗೆ ಎಣ್ಣೆ ಬಳಕೆ ಕಡಿಮೆ ಮಾಡಿದರೆ ಆರೋಗ್ಯಕ್ಕೂ ಲಾಭವಾಗುತ್ತದೆ ಎಂದರು. ರೈತರು ರಾಸಾಯನಿಕ ಗೊಬ್ಬರ ಬಳಕೆಯನ್ನು ಕಡಿಮೆ ಮಾಡಿ ನೈಸರ್ಗಿಕ ಕೃಷಿಗೆ ಒತ್ತು ನೀಡಬೇಕು ಎಂದು ಸಲಹೆ ನೀಡಿದರು. ವಿದೇಶಿ ಉತ್ಪನ್ನಗಳ ಖರೀದಿ, ಅನಗತ್ಯ ವಿದೇಶ ಪ್ರಯಾಣ ಹಾಗೂ ಚಿನ್ನಾಭರಣ ಖರೀದಿಯನ್ನು ತಾತ್ಕಾಲಿಕವಾಗಿ ತಪ್ಪಿಸಲು ಪ್ರಧಾನಿ ಕರೆ ನೀಡಿದ್ದಾರೆ.



