ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಶಿವಕುಮಾರ್ ಕೆ.ಬಿ ಅಧಿಕಾರ ವಹಿಸಿಕೊಂಡಿದ್ದಾರೆ.
2010ರ ಬ್ಯಾಚ್ನ ಅಧಿಕಾರಿಯಾಗಿರುವ ಅವರು ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
2013ರ ಬ್ಯಾಚ್ನ ಐಎಎಸ್ ಅಧಿಕಾರಿ ಸೆಲ್ವಮಣಿ ಆರ್ ಅವರಿಂದ ಅಧಿಕಾರ ಸ್ವೀಕರಿಸಿದ ಶಿವಕುಮಾರ್, ಸಾರಿಗೆ ಕ್ಷೇತ್ರದಲ್ಲಿ ತಮ್ಮ ಅನುಭವದೊಂದಿಗೆ ಕೆಎಸ್ಆರ್ಟಿಸಿಯ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವ ನಿರೀಕ್ಷೆ ಮೂಡಿಸಿದ್ದಾರೆ.



