ಮಂಡ್ಯ: 70 ವರ್ಷದ ಸಮಸ್ಯೆ 20 ವರ್ಷದ ಹೋರಾಟಕ್ಕೆ ಫಲ ದೊರೆತಿದ್ದು, ತಮಿಳುಕಾಲೋನಿ ನಿವಾಸಿಗಳ ಸಮಸ್ಯೆಯನ್ನು ಬಗೆಹರಿಸಿದ ಮಂಡ್ಯ ಕೈ ಶಾಸಕ ಗಣಿಗ ರವಿಕುಮಾರ್ ಬಗೆಹರಿಸಿದ್ದಾರೆ.
ಮಂಡ್ಯದ ಹಾಲಹಳ್ಳಿ ನ್ಯೂ ತಮಿಳು ಕಾಲೋನಿ ನಿವಾಸಿಗಳಿಗೆ ಮಂಡ್ಯ ಶಾಸಕ ಗಣಿಗ ರವಿಕುಮಾರ್ ಹಕ್ಕುಪತ್ರ ವಿತರಿಸಿದ್ದಾರೆ.
ಕಳೆದ 70 ವರ್ಷಗಳು ಮಂಡ್ಯದ ನ್ಯೂ ತಮಿಳು ಕಾಲೋನಿಯ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ಥಳೀಯ ನಿವಾಸಿಗಳು ಹಕ್ಕುಪತ್ರಕ್ಕಾಗಿ 20 ವರ್ಷದಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರು.

ವಸತಿ ಇಲಾಖೆ ಹಾಗೂ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು 168 ನಿವಾಸಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಸಕ ಗಣಿಗ ರವಿಕುಮಾರ್ ಹಕ್ಕುಪತ್ರ ವಿತರಿಸಿದರು.
ಹಕ್ಕುಪತ್ರ ಕೊಟ್ಟು ಮಂಡ್ಯ ಶಾಸಕ ರವಿಕುಮಾರ್ ಗೆಅದ್ದೂರಿ ಸ್ವಾಗತ ಕೋರಿ ಅಭಿನಂದನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಎಂಎಲ್.ಸಿ ದಿನೇಶ್ ಗೂಳಿಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು, ನಗರಸಭಾ ಸದಸ್ಯೆ ಪಳನಿ, ಗೀತಾ ಕುಮಾರಸ್ವಾಮಿ, ಶ್ರೀಧರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.