Monday, June 9, 2025
Google search engine

Homeರಾಜ್ಯಬಿ ಎಸ್​ ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯ ಹೊಣೆ ಸಿಐಡಿಗೆ ವರ್ಗ

ಬಿ ಎಸ್​ ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯ ಹೊಣೆ ಸಿಐಡಿಗೆ ವರ್ಗ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಬಿ ಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್ ​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಯಡಿಯೂರಪ್ಪ ವಿರುದ್ಧದದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ತಿಳಿಸಿದ್ದಾರೆ. ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಇನ್ನು ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

RELATED ARTICLES
- Advertisment -
Google search engine

Most Popular