ಚಿಕ್ಕೋಡಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆ -2024ರ ಕುರಿತು ಚಿಕ್ಕೋಡಿ ಆರ್. ಪ್ರೌಢಶಾಲಾ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾ. 28 ಗುರುವಾರ ಭೇಟಿ ನೀಡಿ ಪರಿಶೀಲಿಸಿದರು. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರದ ಸ್ಟ್ರಾಂಗ್ ರೂಂಗಳಿಗೆ ಭದ್ರತೆ ಒದಗಿಸಿರುವ ಮತ ಎಣಿಕೆ ಕೊಠಡಿಗಳನ್ನು ಪರಿಶೀಲನೆ ನಡೆಸಿ, ಸುಗಮ, ಶಾಂತಿಯುತ ಹಾಗೂ ಸಂಘಟಿತ ಮತ ಎಣಿಕೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಜಿ.ಪಂ. ಸಿ.ಇ.ಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಶ್ರೀಮತಿ ಮೆಹಬೂಬಿ. ತಹಸೀಲ್ದಾರ್ ಚಿದಂಬರ ಕುಲಕರ್ಣಿ, ಸಿ.ಪಿ.ಆಯೆ. ಗೋಪಾಲಕೃಷ್ಣ ಗೌಡ, ತಾಲೂಕು. ಪಿ.ಎಂ. ಇ. ಓ. ಜಗದೀಶ ಕಮ್ಮಾರ, ಪೊಲೀಸರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.