Thursday, June 19, 2025
Google search engine

Homeರಾಜ್ಯಸುದ್ದಿಜಾಲಲೋಕಸಭೆ ಚುನಾವಣೆ, ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ, ಜಿಲ್ಲಾ ಚುನಾವಣಾಧಿಕಾರಿಗಳಿಂದ ಮತದಾನದ ಪ್ರತಿಜ್ಞೆ

ಲೋಕಸಭೆ ಚುನಾವಣೆ, ಮಾಜಿ ದೇವದಾಸಿಯರಿಂದ ಮತದಾನ ಜಾಗೃತಿ, ಜಿಲ್ಲಾ ಚುನಾವಣಾಧಿಕಾರಿಗಳಿಂದ ಮತದಾನದ ಪ್ರತಿಜ್ಞೆ

ದಾವಣಗೆರೆ : ಲೋಕಸಭೆ ಚುನಾವಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮೆಟ್ಟಿಲು ಮುಂಭಾಗದಲ್ಲಿ ಮಾಜಿ ದೇವದಾಸಿಯರಿಂದ ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ ಕಾರ್ಯಕ್ರಮದ ಪ್ರತಿಜ್ಞೆ ಮಾಡಲಾಯಿತು. ಜಿಲ್ಲಾಧಿಕಾರಿ ಡಾ.ವೆಂಕಟೇಶ್. ಎಂ.ವಿ ಮತದಾರರ ನಿರ್ಣಯ ನಿಯಮ ಬೋಧಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ನಮ್ಮ ಹಕ್ಕು, ಮತದಾರರಾದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮರೆಯಬಾರದು. 7 ರಂದು ನಿಮ್ಮ ಮತವನ್ನು ಚಲಾಯಿಸಿ ಮತ್ತು ಶೇಕಡಾವಾರು ಹೆಚ್ಚಾಗುವುದನ್ನು ಖಚಿತಪಡಿಸಿಕೊಳ್ಳಿ. ಇದು ಪ್ರಜಾಪ್ರಭುತ್ವದ ಯಶಸ್ಸಿಗೆ ಮಾಡುವ ಕರ್ತವ್ಯ. 85 ವರ್ಷ ವಯಸ್ಸಿನವರು ಮನೆಯಲ್ಲಿಯೇ ಮತದಾನ ಮಾಡಲು ಅವಕಾಶವಿದೆ. ಅವರು ಇರುವ ಸ್ಥಳಗಳಲ್ಲಿ ಮತದಾನ ಮಾಡಲಾಗುವುದು. ದೇಶದ ಅಭಿವೃದ್ಧಿಗೆ ಪ್ರತಿಯೊಂದು ಮತವೂ ಮುಖ್ಯ, ಈ ಬಗ್ಗೆ ಬೇಸರಿಸಿಕೊಳ್ಳದೆ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು.

ಈ ಮೂಲಕ ನೆರೆಹೊರೆಯವರಿಗೂ ಮತದಾನ ಮಾಡಲು ಉತ್ತೇಜನ ನೀಡಬೇಕು. ಮತಗಟ್ಟೆಗೆ ಬರುವ ಎಲ್ಲರಿಗೂ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಮಾಡಲಾಗುವುದು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್. ಬಿ.ಇಟ್ನಾಳ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ವಸಂತಿ ಉಪ್ಪಾರ್, ಜಿ.ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಜಿ.ಪಂ. ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಶಾರದ ದೊಡ್ಡಗೌಡರ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular