ಯಳಂದೂರು: ಬಿಜೆಪಿ ಮುಖಂಡ ಹಾಗೂ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕಿನಕಹಳ್ಳಿ ಬಿ. ರಾಚಯ್ಯ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ತಾಲೂಕಿನ ಕಿನಕಹಳ್ಳಿ ಗ್ರಾಮದ ಬಿ. ರಾಚಯ್ಯ ಕರ್ನಾಟಕ ಮುಕ್ತ ವಿವಿಯ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದಲ್ಲಿ ಎಸ್.ಸಿ. ಮೋರ್ಚಾದ ಜಿಲ್ಲಾಧ್ಯಕ್ಷರಾಗಿದ್ದರು. ಆದರೆ ಬಿಜೆಪಿ ಪಕ್ಷದಲ್ಲಿ ತಮ್ಮನ್ನು ಕಳೆದ ವಿಧಾನಸಭೆ ಚುನಾವಣೆಯೂ ಸೇರಿದಂತೆ ಈ ಚುನಾವಣೆಯಲ್ಲೂ ಗಣನೆಗೆ ತೆಗೆದುಕೊಳ್ಳಲಿಲ್ಲ ಆದ್ದರಿಂದ ನಾನು ಈ ಪಕ್ಷ ತೊರೆಯುತ್ತಿದ್ದೇನೆ. ಅಲ್ಲದೆ ಕಾಂಗ್ರೆಸ್ ಪಕ್ಷದ ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್, ಹೆಚ್.ಸಿ. ಮಹದೇವಪ್ಪ ರವರ ವೈಯುಕ್ತಿಕ ಕೆಲಸಗಳು, ಅಲ್ಲದೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು, ಬಡವರ, ನೊಂದವರ, ದಮನಿತ ವರ್ಗಗಳ ಪರವಾಗಿದ್ದು, ಇದರಿಂದ ನಾನು ಆಕರ್ಷಿತನಾಗಿ ನನ್ನ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದೇನೆ. ನನ್ನ ಜೊತೆ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಪುಟ್ಟಸುಬ್ಬಪ್ಪ, ರಾಜಣ್ಣ, ವೈ.ಕೆ.ಮೋಳೆ ರಾಜು ಸೇರಿದಂತೆ ನೂರಾರು ಬೆಂಬಲಿಗರು ಶುಕ್ರವಾರ ಕೊಳ್ಳೇಗಾಲದಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಲಿದ್ದೇನೆ ಎಂದು ಮಾಹಿತಿ ನೀಡಿದರು.