ಬೆಂಗಳೂರು: ಲೋಕಸಭೆಯ ಮೊದಲ ಹಂತದ ಚುನಾವಣಾ ಪ್ರಚಾರ ಜೋರಾಗಿದ್ದು, ರಾಜ್ಯಕ್ಕೆ ರಾಷ್ಟ್ರ ನಾಯಕರು ಎಂಟ್ರಿ ಕೊಡುತ್ತಿದ್ದಾರೆ. ಕಾಂಗ್ರೆಸ್ನಾಯಕ ರಾಹುಲ್ ಗಾಂಧಿ ಏಪ್ರಿಲ್೧೭ ರಂದು ಪಕ್ಷದ ಅಭ್ಯರ್ಥಿಗಳ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಮಂಡ್ಯದಲ್ಲಿ ಮೊದಲ ಬಹಿರಂಗ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಪ್ರತಿಷ್ಠೆಯ ಕಣ ಮಂಡ್ಯದಲ್ಲಿ ಪಕ್ಷದ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಪರ ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ ಕೋಲಾರ ಕ್ಷೇತ್ರದಲ್ಲಿ ನಡೆಯಲಿರುವ ಮತ್ತೊಂದು ಪ್ರಚಾರ ಸಭೆ ಹಾಗೂ ರೋಡ್ ಶೋದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ, ಬೆಂಗಳೂರಿನಲ್ಲೂ ರೋಡ್ ಶೋ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.