ಮೈಸೂರು: ಮೈಸೂರು ಬ್ಯೂಟಿಷಿಯನ್ ವೆಲ್ ಫ್ಲೇರ್ ಅಸೋಸಿಯೇಷನ್ ವತಿಯಿಂದ ಇಂದು ಮಂಗಳವಾರ ಆಯೋಜಿಸಿದ್ದ ತ್ರಿಷಿಕಾ ಕುಮಾರಿ ಯದುವೀರ್ ಒಡೆಯರ್ ಅವರ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದಿಂದ ಜಾರಿ ಮಾಡಿರುವ ನಾರಿಶಕ್ತಿ ಉತ್ತೇಜಿಸುವ ಕಾರ್ಯಕ್ರಮಗಳ ಸ್ಮರಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ಶಕ್ತಿಗಳಾದ ನಾರಿ ಶಕ್ತಿ, ಯುವಶಕ್ತಿ, ರೈತಶಕ್ತಿ ಬಡವರ್ಗದವರು ಇವರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಅದರಲ್ಲೂ ನಾರಿ ಶಕ್ತಿಯನ್ನು ಉತ್ತೇಜಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ.
ಮಾಜಿ ಸಚಿವ ಎಸ್.ಎ ರಾಮದಾಸ್, ಆಲ್ ಇಂಡಿಯಾ ಬ್ಯೂಟಿಷಿಯನ್ ವೆಲ್ ಫ್ಲೇರ್ ಅಸೋಸಿಯೇಷನ್ ಅಧ್ಯಕ್ಷರಾದ ಉಮಾ ಜಾದವ್ ಮೈಸೂರು ಅಸೋಸಿಯೇಷನ್ ಅಧ್ಯಕ್ಷರಾದ ವೇದ ರೈ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷರಾದ ರಘುಕೌಟಿಲ್ಯ ಮೈಸೂರು ನಗರದ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ನಾಗೇಂದ್ರ ಮೈಸೂರು ಮಹಿಳಾ ಮೋರ್ಚ ನಗರ ಅಧ್ಯಕ್ಷರಾದ ರೇಣುಕಾ ಗಣ್ಯರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.