ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಸಂಗ್ರಹದ ಪೆನ್ ಡ್ರೈವ್ ಪ್ರಕರಣ ಬಗ್ಗೆ ಬಿಜೆಪಿ ನಾಯಕರು ತಡವಾಗಿ ಮೌನ ಮುರಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕ ಸಿ ,ಟಿ ರವಿ ಇಂದು ಸೋಮವಾರ ಮಾತನಾಡಿ, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಎರಡು ದಿನ ಬಾಕಿಯಿರುವಾಗ ಸಾರ್ವಜನಿಕವಾಗಿ ಇದು ಬೆಳಕಿಗೆ ಬರುತ್ತಿದ್ದಂತೆ ನಮಗೆ ಈ ವಿಷಯ ಗೊತ್ತಾಯಿತು. ಈ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ನಾವು ಅದನ್ನು ಬೆಂಬಲಿಸುತ್ತೇವೆ ಎಂದರು.
ಪ್ರಜ್ವಲ್ ಲೈಂಗಿಕ ಹಗರಣ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ಕೆಟ್ಟ ಸಂಗತಿಗಳು ಸಮಾಜದ ಮೇಲೆ ಪರಿಣಾಮ ಬೀರಲ್ಲ ಎಂದರೆ ಸಮಾಜ ಸಂವೇದನೆ ಕಳೆದುಕೊಂಡಂತೆ. ಒಳ್ಳೆಯ ಸಂಗತಿಗಳು ಹೇಗೆ ಸಮಾಜದ ಮೇಲೆ ಪರಿಣಾಮ ಬೀರುತ್ತವೆಯೋ ಅಷ್ಟೇ ಕೆಟ್ಟ ಸಂಗತಿಗಳು ಕೂಡ ಪರಿಣಾಮ ಬೀರುತ್ತವೆ. ಆದರೆ ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಎಂಬುದು ಸುಳ್ಳು ಎಂದು ಸಿ.ಟಿ ರವಿ ಹೇಳಿದರು.