ಮಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ನೀಡುವ ಮೂಲಕ ಶಿಕ್ಷಣ ಬೆಳವಣಿಗೆಗೆ ನೆರವು ನೀಡುತ್ತಿರುವುದು ಶ್ಲಾಘನೀಯ. ಇಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಜಮಾತೆ ಇಸ್ಲಾಮಿ ಹಿಂದ್ ಉಳ್ಳಾಲ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಕರೀಂ ಹೇಳಿದರು
ಅವರು ಬಬ್ಬುಕಟ್ಫೆ ಅಲ್ ಫುರ್ಕಾನ್ ಅರೆಬಿಕ್ ಇನ್ಸ್ಟಿಟ್ಯೂಟ್ ನಲ್ಲಿ ನಡೆದ ಬಂಧುತ್ವ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಸ್ಮಾಯಿಲ್ ಶಾಫಿ ಬಬ್ಬುಕಟ್ಫೆ ಸ್ವಾಗತಿಸಿದರು.
ಅಬ್ಬಾಸ್ ಪಡಿಕಲ್ ದುಆ ನೆರವೇರಿಸಿದರು.
ಅಬ್ದುಲ್ ಅಝೀಝ್ ಪುಣಚ ಪ್ರಾಸ್ತಾವಿಕವಾಗಿ ಮಾತನಾಡಿದರು.ತೊಕ್ಕೊಟ್ಟು ಮಸ್ಜಿದುಲ್ ಹುದಾ ಅಧ್ಯಕ್ಷ ಯು.ಎಮ್. ಹಸನಬ್ಬ ಬಂಧುತ್ವ ಚಾರಿಟೇಬಲ್ ಟ್ರಸ್ಟ್ ನಾ ಪೋಸ್ಟರ್ ಬಿಡುಗಡೆ ಮಾಡಿದರು.ಕಾಂಗ್ರೆಸ್ ಮುಖಂಡ ಮ್ಯಾಕ್ಸಿಮ್ ಡಿ ಸೋಜ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಪೊಸಕುರಲ್ ಡೈರೆಕ್ಟರ್ ವಿದ್ಯಾಧರ್ ಶೆಟ್ಟಿ, ಮಂಚಿಲ ಅಂಗನವಾಡಿ ಕಾರ್ಯಕರ್ತೆ ಸ್ವರ್ಣಲತಾ, ಕಾಂಗ್ರೆಸ್ ಮುಖಂಡ ಮ್ಯಾಕ್ಸಿಮ್ ಡಿಸೋಜಾ, ಸಲೀಂ ಮೇಘಾ, ಉಪಸ್ಥಿತರಿದ್ದರು.
ಬ್ಯಾರಿ ಅಕಾಡೆಮಿಯ ನಿಕಟಪೂರ್ವ ಸದಸ್ಯ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿದರು.