ನವದೆಹಲಿ: ಹರಿಯಾಣದ ಹೊಸ ಬಿಜೆಪಿ ಸರ್ಕಾರ ಅಕ್ಟೋಬರ್ ೧೭ ರಂದು ಪಂಚಕುಲದಲ್ಲಿ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಭಾರತೀಯ ಜನತಾ ಪಕ್ಷ ಇಂದು ಶನಿವಾರ ದೃಢಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕರು ಮತ್ತು ಇತರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅ ೧೭ ರಂದು ಪಂಚಕುಲದಲ್ಲಿ ಸಿಎಂ ಮತ್ತು ಮಂತ್ರಿಮಂಡಲ ಪ್ರಮಾಣವಚನ ಸ್ವೀಕರಿಸಲಿದೆ ಎಂದು ನಮಗೆ ಪ್ರಧಾನಿಯವರ ಅನುಮೋದನೆ ಸಿಕ್ಕಿದೆ ಎಂದು ಖಟ್ಟರ್ ಹೇಳಿದರು.
ಏತನ್ಮಧ್ಯೆ, ಪಂಚಕುಲದಲ್ಲಿ ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಮಾರ್ಚ್ನಲ್ಲಿ ಮನೋಹರ್ ಲಾಲ್ ಖಟ್ಟರ್ ಬದಲಿಗೆ ಮುಖ್ಯಮಂತ್ರಿಯಾಗಿ ನೇಮಕಗೊಂಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ನಯಾಬ್ ಸಿಂಗ್ ಸೈನಿ ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.