Sunday, January 11, 2026
Google search engine

Homeರಾಜ್ಯಬೆಂಗಳೂರಿನಲ್ಲಿ ಇಂದು ತುಂತುರು ಮಳೆ : ವಾಹನ ಸವಾರರಿಗೆ ಕಿರಿಕಿರಿ

ಬೆಂಗಳೂರಿನಲ್ಲಿ ಇಂದು ತುಂತುರು ಮಳೆ : ವಾಹನ ಸವಾರರಿಗೆ ಕಿರಿಕಿರಿ

ಬೆಂಗಳೂರು: ಕೆಲ ದಿನಗಳಿಂದ ಮಳೆರಾಯ ಕೊಂಚ ಬಿಡುವು ಪಡೆದುಕೊಂಡಿತ್ತು. ನಂತರ ನಗರದಲ್ಲಿ ವಿಪರೀತ ಮಳೆ ಶುರುವಾಗಿದ್ದು ಜನರು ನಲುಗಿ ಹೋಗಿದ್ದಾರೆ. ಈ ನಡುವೆ ಇಂದು ಸೋಮವಾರ ನಗರದ ಹಲವಡೆ ತುಂತುರು ಮಳೆಯಾಗುತ್ತಿದೆ.

ಬೆಂಗಳೂರಿನ ಚಾಲೂಕ್ಯ ಸರ್ಕಲ್, ಕೆ.ಆರ್. ಮಾರ್ಕೆಟ್, ವಿಜಯನಗರ, ಶಾಂತಿನಗರ, ಮೆಜೆಸ್ಟಿಕ್, ಟೌನ್ ಹಾಲ್ ಸೇರಿದಂತೆ ಹಲವಡೆ ತುಂತುರು ಮಳೆಯಾಗುತ್ತಿದ್ದು, ಜಿಟಿಜಿಟಿ ಮಳೆಯಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದೆ. ಈ ಮಧ್ಯೆಯೇ ಬೆಂಗಳೂರಿನಲ್ಲಿ ಮತ್ತೆ ವರುಣ ಸಿಂಚನ ಆರಂಭವಾಗಿದೆ. ಬೆಂಗಳೂರು ವಾತಾವರಣ ಕೂಲ್- ಕೂಲ್ ಆಗಿದ್ದು, ಬೆಳಗೆದ್ದು ಕೆಲಸಕ್ಕೆ ತೆರಳುವ ಮಂದಿಗೆ ಕೊಂಚ ಕಿರಿಕಿರಿ ಉಂಟು ಮಾಡುತ್ತಿದೆ.

ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ತುಂತುರು ಮಳೆಯ ಸಿಂಚನವಾಗಿದೆ. ಹೀಗಾಗಿ ವಾಹನ ಸವಾರರಿಗೂ ತೊಂದರೆ ಆಗಿದೆ. ಸದ್ಯ ಮೋಡ ಕವಿದ ವಾತಾವರಣವಿದ್ದು, ನಗರದ ಹಲವಡೆ ಮಂಜು ಮುಸುಕಿದೆ. ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular