Friday, January 2, 2026
Google search engine

Homeಅಪರಾಧಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ

ಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಎ.1 ಆರೋಪಿಯಾಗಿರುವಂತ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ವಜಾಗೊಳಿಸಿತ್ತು. ಈ ಬೆನ್ನಲ್ಲೇ ಜಾಮೀನು ಕೋರಿ ಪವಿತ್ರಾ ಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅಕ್ಟೋಬರ್.14ರಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಜಾಮೀನು ಕೋರಿ ಸಲ್ಲಿಸಿದ್ದಂತ ಎ.1 ಆರೋಪಿ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿತ್ತು. ಜಾಮೀನು ಅರ್ಜಿ ವಜಾಗೊಂಡ ನಂತ್ರ, ಆರೋಪಿ ಪವಿತ್ರಾ ಗೌಡ ಕಣ್ಣೀರಿಟ್ಟಿದ್ದರು.

ಈ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೀಗಾಗಿ ಅವರು ಹೈಕೋರ್ಟ್ ಗೆ ಜಾಮೀನು ಕೋರಿ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಈ ಬಳಿಕ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಕೂಡ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular