Saturday, June 21, 2025
Google search engine

Homeರಾಜ್ಯಸುದ್ದಿಜಾಲನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನ

ನಾಳೆ ನಾಮಪತ್ರ ಸಲ್ಲಿಕೆಗೆ ಕಡೆ ದಿನ


ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಸ್ಥಾನಗಳಿಗೆ ಅ.೨೮ರಂದು ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಚುನಾವಣಾ ಕಣ ರಂಗೇರಿದ್ದು ನಾಮಪತ್ರ ಸಲ್ಲಿಕೆಗೆ ಕಡೆ ದಿನವಾದ ಶುಕ್ರವಾರ ೧೫ ಮಂದಿ ನಿರ್ದೇಶಕ ಸ್ಥಾನದ ಆಯ್ಕೆ ಬಯಸಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

೩೪ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಈವರೆಗೆ ಒಟ್ಟು ೫೫ ಮಂದಿ ಆಕಾಂಕ್ಷಿಗಳು ನಾಮಪತ್ರ ಸಲ್ಲಿಸಿದ್ದು ಇದರಿಂದ ಚುನಾವಣಾ ಜ್ವರ ಕಾವೇರಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಅ,೧೯ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ೨೧ರಂದು ವಾಪಾಸಾತಿಗೆ ಕಾಲಾವಕಾಶ ನಿಗಧಿ ಮಾಡಲಾಗಿದ್ದು ಅಂದು ಸಂಜೆ ಅಂತಿಮವಾಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಲಾಗುತ್ತದೆಯಲ್ಲದೆ ೨೮ರ ಸೋಮವಾರ ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೬ರವರೆಗೆ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಸಿ ಆನಂತರ ಮತ ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಚುನಾವಣಾಧಿಕಾರಿಯಾಗಿರುವ ಬಿಆರ್‌ಸಿ ವೆಂಕಟೇಶ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular