ಬೆಂಗಳೂರು: ಮುಡಾ ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಪಾಸ್ಪೋರ್ಟ್ ವಶಕ್ಕೆ ಪಡೆಯುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಇ.ಡಿ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.
ಇಡಿ ತನಿಖೆ ಇಷ್ಟೊಂದು ಚುರುಕುಗೊಂಡಿರುವ ಪರಿಸ್ಥಿತಿಯಲ್ಲಿ ಇಡೀ ಪ್ರಕರಣ ಮತ್ತೊಂದು ಮಜಲು ತಲುಪಿದಂತಾಗಿದೆ. ಅಧಿಕಾರದ ಅತ್ಯುನ್ನತ ಸ್ಥಾನದಲ್ಲಿರುವವರು, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು ಈ ಪ್ರಕರಣದಲ್ಲಿ ಆರೋಪಿಗಳಾಗಿರುವುದರಿಂದ, ಈ ಪ್ರಕರಣ ಎಷ್ಟು ಗಂಭೀರವೋ ಅಷ್ಟೇ ಸೂಕ್ಷ್ಮವೂ ಆಗಿದೆ ಎಂದಿದ್ದಾರೆ.
ಮೂಡಾದಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನ ಜಾರಿ ನಿರ್ದೇಶನಾಲಯ ತನಿಖೆ ಮಾಡುತ್ತಿದೆ. ಇ.ಡಿ. ಅಧಿಕಾರಿಗಳು ಮೈಸೂರಿನ ಮೂಡಾ ಕಚೇರಿಗೆ, ತಾಲ್ಲೂಕು ಕಚೇರಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ.