Wednesday, May 21, 2025
Google search engine

Homeರಾಜ್ಯಬೆಳಗಾವಿಯಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

ಬೆಳಗಾವಿಯಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

ಬೆಳಗಾವಿ : ಮೀನು ಹಿಡಿಯಲು ತಂದೆ ಇಬ್ಬರು ಮಕ್ಕಳು ನದಿಗೆ ತೆರಳಿದ್ದಾರೆ. ಆದರೆ ಮಗನೋಬ್ಬ ನೀರಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ತೆರಳಿದ್ದ ತಂದೆ ಹಾಗೂ ಇನ್ನೊಬ್ಬ ಮಗ ಕೂಡ ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಈ ಒಂದು ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಲಕ್ಷ್ಮಣ ರಾಮ (49), ರಮೇಶ (15) ಹಾಗೂ ಯಲ್ಲಪ್ಪ (13) ನೀರು ಪಾಲಾಗಿದ್ದಾರೆ ಎಂದು ತಿಳಿದುಬಂದಿದೆ. ಮೀನು ಹಿಡಿಯಲು ಬಲೆ ಹಾಕಲು ತಂದೆ ಮತ್ತು ಮಕ್ಕಳು ನದಿಗೆ ಇಳಿದಿದ್ದರು.

ಈ ವೇಳೆ ಓರ್ವ ಪುತ್ರ ನೀರಿನಲ್ಲಿ ಮುಳುಗಿದ್ದಾನೆ.ಆತನನ್ನು ರಕ್ಷಿಸಲು ಹೋಗಿದ್ದ ತಂದೆ ಹಾಗೂ ಮತ್ತೊಬ್ಬ ಮಗ ಸಹ ನೀರು ಪಾಲಾಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಮೂವರಿಗಾಗಿ ಸದ್ಯ ಎನ್ ಡಿ ಆರ್ ಎಫ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದು, ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular