Saturday, June 7, 2025
Google search engine

Homeಸ್ಥಳೀಯಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ : ಜಿ.ಲಕ್ಷೀಕಾಂತ ರೆಡ್ಡಿ

ಭತ್ತ ಮತ್ತು ರಾಗಿ ಕಟಾವು ಯಂತ್ರಕ್ಕೆ ಬಾಡಿಗೆ ದರ ನಿಗಧಿ : ಜಿ.ಲಕ್ಷೀಕಾಂತ ರೆಡ್ಡಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ೨೦೨೫-೨೬ ನೇ ಸಾಲಿನ ಬೇಸಿಗೆ ಹಂಗಾಮಿನಲ್ಲಿ ೧೧೬೧೨ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಆವರಿಸಿದ್ದು, ಈಗಾಗಲೇ ಕಟಾವು ಕಾರ್ಯ ಪ್ರಾರಂಭವಾಗಬೇಕಾಗಿರುತ್ತದೆ. ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿ ಕಟಾವಿಗೆ ರೈತರು ಕಂಬೈನ್ಸ್ ಹಾರ್ವೆಸ್ಟರ್ ಯಂತ್ರಗಳನ್ನು ಬಾಡಿಗೆಗೆ ಪಡೆದು ಒಕ್ಕಣೆ ಮಾಡುವುದು ವಾಡಿಕೆಯಾಗಿರುತ್ತದೆ. ಆದ್ದರಿಂದ ಕಂಬೈನ್ಸ್ ಹಾರ್ವೆಸ್ಟರ್ ಯಂತ್ರಗಳ ಬಾಡಿಗೆ ದರವನ್ನು ನಿಗಧಿಪಡಿಸುವ ಸಲುವಾಗಿ ಜೂನ್ ೦೫ ರಂದು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಜಿ.ಲಕ್ಷೀಕಾಂತ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಭತ್ತ ಕಟಾವು ಯಂತ್ರದಿಂದ ಕಟಾವು ಮಾಡಲು ಪ್ರತಿ ಗಂಟೆಗೆ ಚೈನ್ ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗರಿ? ಗಂಟೆಗೆ ರೂ. ೨೫೦೦/- (ರೂಪಾಯಿ ಎರಡು ಸಾವಿರದ ಐದು ನೂರು ಮಾತ್ರ), ಟೈರ್ (ಗ್ರಿಪ್) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿ? ರೂ. ೨೦೦೦/- (ರೂಪಾಯಿ ಎರಡು ಸಾವಿರ ಮಾತ್ರ) ಗಳಂತೆ ಟೈರ್ (ಸಾಮಾನ್ಯ) ಮಾದರಿ ಭತ್ತದ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿ? ರೂ. ೧೮೦೦/- (ರೂಪಾಯಿ ಒಂದು ಸಾವಿರದ ಎಂಟು ನೂರು ಮಾತ್ರ) ಗಳಂತೆ ಹಾಗೂ ರಾಗಿ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿ? ರೂ. ೨೯೦೦/- (ರೂಪಾಯಿ ಎರಡು ಸಾವಿರದ ಒಂಬತ್ತು ನೂರು ಮಾತ್ರ) ಗಳಂತೆ ದರವನ್ನು ನಿಗಧಿಪಡಿಸಲಾಯಿತು.

ಸಭೆಯಲ್ಲಿ ರೈತರು. ರೈತ ಮುಖಂಡರು, ಪೊಲೀಸ್ ಅಧಿಕಾರಿಗಳು, ಆರ್.ಟಿ.ಒ. ಅಧಿಕಾರಿಗಳು ಹಾಗೂ ಸಂಬಂಧಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular