ದಾವಣಗೆರೆ : ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ಶನಿವಾರ ತಡರಾತ್ರಿ ಬಾರೀ ಸ್ಪೋಟದ ಶಬ್ಬ ಕೇಳಿಸಿದ್ದು, ಜನರು ಬೆಚ್ಚಿ ಬಿದ್ದಿರುವ ಘಟನೆ ನಡೆದಿದೆ.
ಜಗಳೂರು ಪಟ್ಟಣದಲ್ಲಿ 5 ದಶಕಗಳ ನಂತರ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಬೃಹತ್ ಕಲ್ಲು ಬಂಡೆ, ಕಲ್ಲುಬಂಡೆ ತೆರವು ಮಾಡಲು ಜಿಲೆಟಿನ್ ಕಡ್ಡಿ ಸ್ಪೋಟಿಸಿದ್ದು, ಜನವಸತಿ ಪ್ರದೇಶದಲ್ಲಿ ಸ್ಪೋಟಕ ಬಳಸಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನವಸತಿ ಪ್ರದೇಶದಲ್ಲಿ ಜಿಲೆಟಿನ್ ಕಡ್ಡಿ ಸ್ಪೋಟಿಸಿದ್ದ ಗುತ್ತಿಗೆದಾರರು, ಸ್ಪೋಟದ ರಭಸಕ್ಕೆ ಹಲವು ಮನೆಗಳ ಮೇಲೆ ಕಲ್ಲುಗಳು ಬಿದ್ದಿದ್ದವು. ಇದೀಗ ಇಬ್ಬರು ಗುತ್ತಿಗೆದಾರರ ವಿರುದ್ಧಎಫ್ ಐಆರ್ ದಾಖಲಾಗಿದೆ. ಗುತ್ತಿಗೆದಾರ ಅರುಣ್ ಕುಮಾರ್, ಉಚ್ಚಂಗಿ ದುರ್ಗದ ಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.