ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಸಂಸದ ಮತ್ತು ಶಾಸಕರ ಮನೆ, ಕಚೇರಿ ಮೇಲೆ ಇಡಿ ದಾಳಿ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರೇ ತಪ್ಪು ಮಾಡಿದರೂ ಕ್ರಮ ಕೈಗೊಳ್ಳಲಿ, ಆದರೆ ತಪ್ಪುಗಳನ್ನು ಬೆಂಬಲಿಸುವುದಿಲ್ಲ ಎಂದು ಹೇಳಿದರು.
ಗೌರಿಬಿದನೂರಿನಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ನೀರು ಇನ್ನೆರಡು ವರ್ಷಗಳಲ್ಲಿ ಹರಿಯಲಿದೆ ಎಂದು ಹೇಳಿದ್ದಾರೆ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ದಿ ಕುಂಠಿತವಾಗಿಲ್ಲ ಹಾಗೂ ಆಯುಷ್ಮಾನ್ ಭಾರತದಲ್ಲಿ ರಾಜ್ಯದ ವಂತಿಗೆ ಹೆಚ್ಚು ಇರುವುದಾಗಿ ಅವರು ಸ್ಪಷ್ಟಪಡಿಸಿದರು.