Tuesday, June 17, 2025
Google search engine

Homeಅಪರಾಧಮಂಗಳೂರು ದೇರಳಕಟ್ಟೆಯಲ್ಲಿ ಆಕಸ್ಮಿಕ ಬೆಂಕಿ: 147 ವಿದ್ಯಾರ್ಥಿಗಳು ಪಾರು

ಮಂಗಳೂರು ದೇರಳಕಟ್ಟೆಯಲ್ಲಿ ಆಕಸ್ಮಿಕ ಬೆಂಕಿ: 147 ವಿದ್ಯಾರ್ಥಿಗಳು ಪಾರು

ಮಂಗಳೂರು (ದಕ್ಷಿಣ ಕನ್ನಡ) : ಕಟ್ಟಡವೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿ ಕಟ್ಟಡದೊಳಕ್ಕಿದ್ದ 147 ವಿದ್ಯಾರ್ಥಿಗಳು ಯಾವುದೇ ಅಪಾಯವಿಲ್ಲದೆ‌ ಪಾರಾಗಿದ್ದು, ಅವರನ್ನು ಬೇರೆ ಕಟ್ಟಡಕ್ಕೆ ಸ್ಥಳಾಂತರಿಸಿದ ಘಟನೆ ‌ಮಂಗಳೂರು‌ ಹೊರವಲಯದ ದೇರಳಕಟ್ಟೆ ಜಂಕ್ಷನ್‌ ನಲ್ಲಿ ರಾತ್ರಿ ನಡೆದಿದೆ. ರವಿವಾರ ರಾತ್ರಿ 8 ಗಂಟೆಯ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 147 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದು, ಅದಾಗಲೇ ಭಾಗಶ: ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದೆ.

ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಕೆಳಗಿನ ವಿದ್ಯುತ್ ಬೋರ್ಡ್ಗಳೆಲ್ಲವೂ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳೀಯರು ಕಾರ್ಯಾಚರಿಸಿ ಬೆಂಕಿ ನಂದಿಸಿದ್ದಾರೆ. 147ವಿದ್ಯಾರ್ಥಿಗಳನ್ನು ಖಾಸಗಿ ಸಂಸ್ಥೆಯವರೇ ಸ್ಥಳಾಂತರ ಮಾಡಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಸಹಕರಿಸಿದರು.

RELATED ARTICLES
- Advertisment -
Google search engine

Most Popular