ಬೆಂಗಳೂರು: ಪಿಎಂಎಲ್ ಎ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಇಡಿ ದಾಖಲಿಸಿದ್ದ ಪ್ರಕರಣದಲ್ಲಿ ಐಶ್ವರ್ಯಗೌಡಗೆ ಬೆಂಗಳೂರಿನ 1ನೇ ಸಿಸಿಎಚ್ ನ್ಯಾಯಾಲಯ ಷರತ್ತು ಬದ್ದ ಜಾಮೀನು ನೀಡಿದೆ. ಐದು ಲಕ್ಷ ಬಾಂಡ್ ಹಾಗೂ ಇಬ್ಬರ ಶೂರಿಟಿ ನೀಡಬೇಕೆಂದು ಕೋರ್ಟ್ ಆದೇಶಿಸಿದೆ. ಜೊತೆಗೆ ವಿಳಾಸ ಬದಲಾವಣೆ ಮಾಡಬಾರದು ಮತ್ತು ಬೆಂಗಳೂರು ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ವಿಧಿಸಿದೆ.
ಐಶ್ವರ್ಯಗೌಡ ಪರ ವಾದ ಮಂಡಿಸಿದ ವಕೀಲ ಎಸ್. ಸುನೀಲ್ ಕುಮಾರ್, ಇಡಿ ಅನುಸೂಚಿತ ಪ್ರಕರಣವಿಲ್ಲದಿದ್ದರೂ ಬಂಧಿಸಿದೆ ಹಾಗೂ ಮಹಿಳೆಗೆ ಬಂಧನದಿಂದ ವಿನಾಯಿತಿ ನೀಡಬೇಕೆಂದು ವಾದಿಸಿದರು. ಮಾಜಿ ಸಂಸದ ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು ಕೋಟ್ಯಾಂತರ ರೂ. ವಂಚನೆ ಆರೋಪ ಐಶ್ವರ್ಯಗೌಡ ಮೇಲಿದ್ದು, ಪ್ರಕರಣವು ಪ್ರಸ್ತುತ ವಿಚಾರಣೆಯಲ್ಲಿ ಇದೆ.