ಬೆಂಗಳೂರು: ನಂದಿಬೆಟ್ಟದಲ್ಲಿ ಗುರುವಾರ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟದ 13ನೇ ಸಭೆಯನ್ನು ದಿಢೀರ್ ರದ್ದುಪಡಿಸಿ, ಕಾರಣಾಂತರಗಳಿಂದ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಈ ಸಭೆಯನ್ನು ಬುಧವಾರ ತಡರಾತ್ರಿ ನಿರ್ಧಾರಮಾಡಿ ಬೆಂಗಳೂರು ವಿಧಾನಸೌಧದಲ್ಲಿ ನಾಳೆ(ಜೂನ್ 19ರಂದು) ಮಧ್ಯಾಹ್ನ 12ಕ್ಕೆ ನಡೆಸಲು ತೀರ್ಮಾನಿಸಲಾಗಿದೆ.
ನಂದಿಬೆಟ್ಟದಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಸಾರ್ವಜನಿಕ ಪ್ರವೇಶ ನಿರ್ಬಂಧಗಳು ಜಾರಿಯಾಗಿದ್ದರೂ, ಇದೀಗ ಸಭೆಯ ಸ್ಥಳ ಬದಲಾವಣೆಗೊಂಡಿದೆ. ಸರ್ಕಾರದ ಈ ನಿರ್ಧಾರ ಮಹತ್ವಪೂರ್ಣವಾಗಿದ್ದು, ಸಭೆ ಸ್ಥಳಾಂತರಕ್ಕೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ.