ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವ ದೇಶಕ್ಕೆ ಅನಿವಾರ್ಯವಾಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೆ.ಆರ್. ನಗರ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಕೆಂಚಿಮಂಜು ಹೇಳಿದರು.
ಪಟ್ಟಣದ ಬಸವೇಶ್ವರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ 55 ನೇ ಜನ್ಮ ದಿನದ ಅಂಗವಾಗಿ ಯುವ ಕಾಂಗ್ರೆಸ್ ವತಿಯಿಂದ ಕೊಡಮಾಡಲಾದ ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ದೇಶ ಸೇವೆ ಮತ್ತು ಜನರ ಹಿತಕಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟಿರುವ ಮಾಜಿ ಪ್ರಧಾನಿ ದಿ.ಜವಹರಲಾಲ್ ನೆಹರು ಕುಟುಂಬದ ಕುಡಿಯಾಗಿರುವ ನಮ್ಮೆಲ್ಲರ ಮನ ಗೆದ್ದಿರುವ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನಿಯಾಗಬೇಕು ಎಂದು ಬಯಕೆ ವ್ಯಕ್ತಪಡಿಸಿದರು.
ತಮ್ಮ ರಾಜಕೀಯ ದುದ್ದಕ್ಕೂ ಅಧಿಕರಕ್ಕೆ ಆಸೆ ಪಡದೆ ಜನಸೇವೆಗಾಗಿ ಕೆಲಸ ಮಾಡುತ್ತಿರುವ ಅವರು ಯುವ ರಾಜಕಾರಣಿ ಗಳಿಗೆ ಮಾದರಿ ವ್ಯಕ್ತಿ ಯಾಗಿದ್ದು ಅವರ ಆಶಯಗಳನ್ನು ಈಡೇರಿಸಲು ನಾವೆಲ್ಲರೂ ಕಂಕಣಬದ್ದರಾಗಿ ಕೆಲಸ ಮಾಡೊಣ ಎಂದು ಯುವ ಕಾಂಗ್ರೆಸ್ ಅಧ್ಯಕ್ಷರು ಕರೆ ನೀಡಿದರು. ಅವರ ಜನ್ಮ ದಿನವನ್ನು ದುಂದುವೆಚ್ಚ ಮಾಡಿ ಆಚರಣೆ ಮಾಡುವ ಬದಲು ವಿಧಾನ ಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ವಿವಿಧ ಶಾಲೆಗಳ ಮಕ್ಕಳಿಗೆ ಲೇಖನ ಸಾಮಾಗ್ರಿಗಳನ್ನು ಕೊಡುವ ಮೂಲಕ ವಿಭಿನ್ನವಾಗಿ ಮಾಡುತ್ತಿದ್ದು ಇವೆಲ್ಲ ಕಾರ್ಯಗಳಿಗೆ ನಮಗೆ ರಾಹುಲ್ ಗಾಂಧಿ ಅವರೇ ಪ್ರೇರಣೆ ಎಂದು ಸಂತಸದಿಂದ ನುಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಪಟ್ಟಣದ ಆಂಜನೇಯ ಬಡಾವಣೆ ಮತ್ತು ಬಸವೇಶ್ವರ ಬಡಾವಣೆ ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 200ಕ್ಕೂ ಅಧಿಕ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಿಸಿ ಮತ್ತಷ್ಟು ಸಹಾಯ ಮಾಡುವ ಭರವಸೆ ನೀಡಲಾಯಿತು.
ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮೋಹನ್, ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಹೇಮಂತ್, ಯುವ ಕಾಂಗ್ರೆಸ್ ಮುಖಂಡರಾದ ಮೋಹನ್, ವೇಣುಗೋಪಾಲ್, ಮುತ್ತುರಾಜ್, ಗೌತಮ್ ಜಾಧವ್, ದರ್ಶನ್, ಪಾಲಾಕ್ಷ, ಶಾಲೆಯ ಮುಖ್ಯ ಶಿಕ್ಷಕಿ ರಮಾಮಣಿ, ಶಿಕ್ಷಕರಾದ ಡಿ.ಟಿ.ಕುಮಾರ್, ರಾಜೇಶ್ವರಿ ಸೇರಿದಂತೆ ಶಾಲೆಯ ವಿದ್ಯಾರ್ಥಿಗಳು ಹಾಜರಿದ್ದರು.