Saturday, June 21, 2025
Google search engine

Homeರಾಜಕೀಯಬೆಂಗಳೂರು ಭೇಟಿ ನೀಡಿದ ಅಮಿತ್ ಶಾ : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ...

ಬೆಂಗಳೂರು ಭೇಟಿ ನೀಡಿದ ಅಮಿತ್ ಶಾ : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಬಿಜೆಪಿ ನಾಯಕರಿಗೆ ಸಲಹೆ

ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬೆಂಗಳೂರಿಗೆ ಆಗಮಿಸಿದ್ದು, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟವನ್ನ ಜಾಸ್ತಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ನಾಯಕರಿಗೆ ಅನೇಕ ಸಲಹೆಗಳನ್ನ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

 ಬರೀ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ಮಾತ್ರ ಮಾಡುತ್ತಿದ್ದು, ಅದಕ್ಕೆ ತಕ್ಕಂತೆ ತೀರ್ಮಾನಗಳನ್ನ ಮಾಡುತ್ತಿದೆ. ನಿನ್ನೆ ವಸತಿ ಇಲಾಖೆಯಡಿ ಅಲ್ಪಸಂಖ್ಯಾತರಿಗೆ ಶೇ 10 ಇದ್ದ ಮೀಸಲಾತಿಯನ್ನು ಶೇ 15ಕ್ಕೆ ಏರಿಸಿದ್ದಾರೆ. ರಾಜ್ಯದಲ್ಲಿ ಮಾತ್ರ ಮುಖ್ಯಮಂತ್ರಿ ಒಡೆದು ಆಳುವ ನೀತಿಯನ್ನ ಅನುಸರಿಸುತ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇನ್ನು ಅವರು ರಾಜ್ಯದ ಮುಖ್ಯಮಂತ್ರಿ ಎಂಬುದನ್ನು ಮರೆತು ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನರೇ ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.

 ರಾಜ್ಯದಲ್ಲಿ ಭ್ರಷ್ಟಚಾರ ತಾಂಡವ ಆಡುತ್ತಿದೆ
ಸದ್ಯ ಎಲ್ಲೆಡೆ ಸುದ್ದಿಯಾಗುತ್ತಿರುವ ಕಾಂಗ್ರೆಸ್ಸಿನ ಬಿ.ಆರ್.ಪಾಟೀಲ್ ಅವರ ಆರೋಪದ ಆಡಿಯೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗಿನಿಂದ, ಅದರ ಹೈಕಮಾಂಡಿನ ಎಟಿಎಂ ಆಗಿ ಬದಲಾಗಿದೆ. ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ 40% ಕಮಿಷನ್‌ ಎಂದು ಆರೋಪ ಮಾಡಿದ್ದರು, ಈಗ ಅವರ ಪಕ್ಷದವರೇ ಆರೋಪ ಮಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವುದೇ ಕೆಲಸ ಆಗಲ್ಲ, ರಾಜ್ಯದಲ್ಲಿ ಭ್ರಷ್ಟಚಾರ ತಾಂಡವ ಆಡುತ್ತಿದೆ ಎಂದಿದ್ದಾರೆ.

ಕಾನೂನು ತರುವುದಾಗಿ ಹೇಳ್ತಾರೆ, ಆದ್ರೆ ತರಲ್ಲ
ಇನ್ನು ರಾಜ್ಯದಲ್ಲಿ ನಡೆದ ಮೈಕ್ರೋ ಫೈನಾನ್‌ಸ್‌ನವರ ಕಿರುಕುಳ ಹಾಗೂ ಆರ್‌ಸಿಬಿ ವಿಜಯೋತ್ಸವದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ಕಾನೂನು ತರುವುದಾಗಿ ಸರ್ಕಾರ ಹೇಳಿತ್ತು, ಆದರೆ ಎಲ್ಲವನ್ನೂ ಮರೆತು ಭ್ರಷ್ಟಚಾರ ಮಾಡುವುದರಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.

ಜಾತಿ, ಧರ್ಮ ನೋಡದೇ ಮೋದಿ ಯೋಜನೆ ಮಾಡ್ತಾರೆ
ಪ್ರಧಾನಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಔರ್ ಸಬ್ ಕಾ ಪ್ರಯಾಸ್ ಎಂಬ ನಿಯಮದ ಆಧಾರದ ಮೇಲೆ ಅಭಿವೃದ್ಧಿ ಮಾಡುತ್ತಿದ್ದು, ಯಾವುದೇ ಜಾತಿ ಹಾಗೂಧರ್ಮದ ಆಧಾರದ ಮೇಲೆ ಯೋಜನೆ ಮಾಡಲ್ಲ. ಎಲ್ಲರಿಗೂ ನ್ಯಾಯ ಕೊಡಿಸುತ್ತಾರೆ. ಅಲ್ಲದೇ, ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ರೈತರಿಗೆ 6 ಸಾವಿರ ಜಮಾ ಆಗುತ್ತಿದ್ದು, ಇದು ಕೇವಲ ಹಿಂದೂಗಳಿಗೆ ಮಾತ್ರ ಅಲ್ಲ, ಹೀಗೆ ಕೇಂದ್ರ ಸರ್ಕಾರದ ಅನೇಕ ಯೋಚನೆಗಳು ಸರ್ವರಿಗೂ ಮೀಸಲಾಗಿದೆ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular