ಮಂಗಳೂರು (ದಕ್ಷಿಣ ಕನ್ನಡ): ವಿಟ್ಲ ಸಮೀಪದ ಉಕ್ಕುಡದಲ್ಲಿ ರಜತ್ ಭಟ್ ಅವರ ಮನೆಯಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ಎರಡು ಪವನ್ನ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಘಟನೆ ವೇಳೆ ಮನೆಯಲ್ಲಿ ಯಾರು ಇದ್ದಿರಲಿಲ್ಲದಿದ್ದ ಕಾರಣ ಕೃತ್ಯ ಸಾಧ್ಯವಾಯಿತು. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ.