Saturday, June 21, 2025
Google search engine

Homeರಾಜಕೀಯಸಿದ್ದರಾಮಯ್ಯ ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ತೀವ್ರ ಮುಜುಗರ

ಸಿದ್ದರಾಮಯ್ಯ ಸರ್ಕಾರಕ್ಕೆ ಸ್ವಪಕ್ಷೀಯರಿಂದಲೇ ತೀವ್ರ ಮುಜುಗರ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷೀಯರಿಂದಲೇ ಅಸಮಾಧಾನ ದಿನೇ ದಿನೇ ಗಂಭೀರವಾಗುತ್ತಿದೆ. ವಸತಿ ಯೋಜನೆ ಕುರಿತಂತೆ ಶಾಸಕ ಬಿ.ಆರ್. ಪಾಟೀಲ್ ಅವರ ಆಡಿಯೋ ವೈರಲ್ ಆಗಿದ್ದೇ ಸರ್ಕಾರಕ್ಕೆ ಮುಜುಗರ ಉಂಟುಮಾಡಿತ್ತು. ಇದೀಗ ಸಚಿವ ಹೆಚ್.ಕೆ. ಪಾಟೀಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಖಾರವಾದ 7 ಪುಟಗಳ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖಾ ಪ್ರಗತಿ ಇಲ್ಲದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, 2007ರಿಂದ 2011ರವರೆಗೆ ನಡೆದ ಅಕ್ರಮಗಳಿಂದ 1.5 ಲಕ್ಷ ಕೋಟಿ ರೂಪಾಯಿ ನಷ್ಟ ಉಂಟಾದದನ್ನು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ನಡೆದ 320 ಕಿಲೋಮೀಟರ್ ಪಾದಯಾತ್ರೆಯ ನೆನಪನ್ನು ಮಾಡಿದ್ದಾರೆ.

ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಳಂಬವಾಗಿರುವುದರಿಂದ, ಪೊಲೀಸ್ ಇಲಾಖೆಯಡಿಯಲ್ಲಿ ಬಲಿಷ್ಠ ಎಸ್‌ಐಟಿ ರಚಿಸಲು ಸಚಿವ ಪಾಟೀಲ್ ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular