ಕೊಪ್ಪಳ: ಕೊಪ್ಪಳದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿ, ಕಳೆದ ಐದು ವರ್ಷಗಳಿಂದ ಖಾಲಿ ಇರುವ 8,000 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಹಿಂದೆ ನೇಮಕಾತಿ ನಡೆದಿರಲಿಲ್ಲವೆಂದು ಹೇಳಿದ ಅವರು, ಈಗ 8,000 ಕಾನ್ಸ್ಟೆಬಲ್ ಮತ್ತು 500 ಸಬ್ಇನ್ಸ್ಪೆಕ್ಟರ್ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ ಎಂದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆ ಅವರಿಗೆ ಮಾಹಿತಿ ಇಲ್ಲವೆಂದು ಹೇಳಿದರು. ಬಿಆರ್ ಪಾಟೀಲ ಆಡಿಯೋ ಕುರಿತಂತೆ, ಅದು ಗಂಭೀರ ಆರೋಪವಲ್ಲ, ಸಂಬಂಧಿಸಿದ ಸಚಿವರಿಗೆ ವಿಷಯ ತಿಳಿಸಿರುವೆ, ದೂರು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.