ಶಿರಸಿ: ಯುವಕನೊಬ್ಬ ಕಾಲುಜಾರಿ ಹಳ್ಳಕ್ಕೆ ಬಿದ್ದು ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.
ಪವನ್ ಗಣಪತಿ ಜೋಗಿ (24) ಕಣ್ಮರೆಯಾದ ಯುವಕ. ಈತ ಮೂಲತಃ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಯುವಕ. ಸ್ನೇಹಿತನಾದ ವಾಸುದೇವ್ ಜೊತೆ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದ.
ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನಿಡಿದ್ದಾರೆ. ಕೊಚ್ಚಿಕೊಂಡು ಹೋಗಿರುವ ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ. ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.