ಬೆಳಗಾವಿ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದ ಸ್ವಾಮೀಜಿಗೆ ಅನಾಚಾರದ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರು ಅವರನ್ನು ಮಠದಿಂದ ಹೊರ ಹಾಕಿದ್ದಾರೆ.
ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದ್ದು, ಬಿಜಾಪುರ ಜಿಲ್ಲೆ ತಾಳಿಕೋಟೆಯಿಂದ ಮಗಳೊಂದಿಗೆ ಬಂದ ಮಹಿಳೆಯೊಬ್ಬರು ತಡರಾತ್ರಿ ಸ್ವಾಮೀಜಿಯ ಕೊಠಡಿಯಲ್ಲಿ ಕಂಡುಬಂದಿದ್ದಾರೆ. ಈ ವಿಚಾರವನ್ನು ಗ್ರಾಮಸ್ಥರು ಮುಖಂಡರಿಗೆ ತಿಳಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಗ್ರಾಮಸ್ಥರು ಸ್ವಾಮೀಜಿಯನ್ನ ತೀವ್ರ ತರಾಟೆಗೆ ತೆಗೆದುಕೊಂಡು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಮಹಿಳೆ ಮತ್ತು ಮಗಳನ್ನು ರಕ್ಷಿಸಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಬಳಿಕ ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ, ಸ್ವಾಮೀಜಿಯನ್ನು ಮಠದಿಂದ ಹೊರಹಾಕಿದ್ದಾರೆ.
ಈ ಘಟನೆ ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.