ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಬೈಕ್ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದ ನಿವೃತ್ತ ಹಿರಿಯ ಪಶುವೈದ್ಯ ಪರೀಕ್ಷಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದ ಹಳಿಯೂರು ಬಡಾವಣೆಯ ನಿವಾಸಿ ಜೆ.ಶಿವಪ್ಪ(65) ಚಿಕಿತ್ಸೆ ಫಲಕಾರಿ ಆಗದೆ ಸೋಮವಾರ ನಿಧನರಾಗಿದ್ದಾರೆ.
ಜೂ.೨೦ ರ ಶುಕ್ರವಾರ ಸಂಜೆ ಕಿತ್ತೂರು -ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ತಮ್ಮ ಮನೆಯ ಸಮೀಪ ಎರಡು ಬೈಕ್ ಗಳ ನಡುವೆ ಡಿಕ್ಕಿ ಆಗಿ ತೀವ್ರವಾಗಿ ಗಾಯಗೊಂಡಿದ್ದ ಇವರನ್ನ ಮೈಸೂರಿನ ಕಾಮಾಕ್ಷಿ ಆಸ್ವತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲು ಮಾಡಲಾಗಿತ್ತು.
ಈ ಸಂಬಂಧ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಿಗೆ ಪತ್ನಿ ಇಬ್ಬರು ಪುತ್ರಿಯರು ಇದ್ದು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಮಂಗಳವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.