ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ದಸರಾ-2025 ನಾಡಹಬ್ಬದ ಪೂರ್ವಭಾವಿ ಸಭೆಯನ್ನು ವಿಧಾನಸೌಧ ಸಭಾಂಗಣದಲ್ಲಿ ಇಂದು ನಡೆಸಿದರು.
ಸಚಿವರು ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಸಭೆಗೆ ಹಾಜರಾಗಿದ್ದರು. ಕಾರ್ಯಕ್ರಮದ ಯಶಸ್ಸು ಹಾಗೂ ಸಕಾಲದಲ್ಲಿ ಸಿದ್ಧತೆಗಳನ್ನು ಪೂರ್ಣಗೊಳಿಸುವ ಬಗ್ಗೆ ಚರ್ಚಿಸಲಾಯಿತು. ಸಚಿವರು, ಶಾಸಕರು ಮತ್ತು ಅಧಿಕಾರಿಗಳಿಂದ ವಿವಿಧ ಸಲಹೆಗಳು ದೊರಕಿದವು.
ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ.ದೇವೇಗೌಡ, ರಮೇಶ್ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್ ಸೇಠ್, ಡಾ.ಯತೀಂದ್ರ ಎಸ್, ಡಾ.ಡಿ.ತಿಮ್ಮಯ್ಯ, ಅನಿಲ್ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.