Sunday, June 29, 2025
Google search engine

Homeಸ್ಥಳೀಯಮಲೆಮಹದೇಶ್ವರದಲ್ಲಿ ಐದು ಹುಲಿಗಳ ಮರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಿ – ಕರ್ನಾಟಕ ಹಿತರಕ್ಷಣಾ ವೇದಿಕೆ...

ಮಲೆಮಹದೇಶ್ವರದಲ್ಲಿ ಐದು ಹುಲಿಗಳ ಮರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಿ – ಕರ್ನಾಟಕ ಹಿತರಕ್ಷಣಾ ವೇದಿಕೆ ಒತ್ತಾಯ

ಮೈಸೂರು: ಮೈಸೂರು ದೇವರಾಜ ಅರಸು ರಸ್ತೆಯಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಮರಣ ಹೋಮ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷಣ ವಿಧಿಸಬೇಕು, ಕರ್ತವ್ಯಲೋಪ ಎಸಗಿರುವ ಹಿರಿಯ ಅಧಿಕಾರಿಗಳ ವಿರುದ್ಧವು ಶಿಸ್ತು ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆಯಲ್ಲಿ ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ಒತ್ತಾಯಿಸಿದರು.

ನಂತರ ಮಾತನಾಡಿದ ಅವರು ಹುಲಿಗಳ ಬಗ್ಗೆ ಸಮಾಜ ಮತ್ತು ಸರ್ಕಾರ ಎರಡೂ ಬಹಳ ಪ್ರಾಮುಖ್ಯತೆ ಕೊಡುತ್ತವೆ, ಅಂತದರಲ್ಲಿ ತಾಯಿ ಹುಲಿ ಹಾಗೂ 4 ಮರಿಗಳು ಸಾವಿಗಿಡಾಗಿರುವುದು ಆಘಾತಕಾರಿಯಾಗಿರುವ ವಿಷಯ, ಹುಲಿಗಳ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷವೇ ಕಾರಣವಾಗಿದ್ದು, ಈ ಬಗ್ಗೆ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು, ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಬಹಳಷ್ಟು ಜನದಟ್ಟಣೆಗೆ
ಅವಕಾಶ ಮಾಡಿಕೊಟ್ಟಿರುವುದು ಇಂತಹ ಅನಾಹುತಗಳಿಗೆ ಕಾರಣವಾಗಿದೆ, ಹಾಗೂ ಅರಣ್ಯ ಪ್ರದೇಶಗಳಲ್ಲಿ ಹೋಂ ಸ್ಟೇ ಹಾಗೂ ರೆಸಾರ್ಟ್ ಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂತಹ ಅವಘಡಗಳು ಹೆಚ್ಚಾಗುತ್ತದೆ. ಅದರ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ವನ್ಯಜೀವಿ ಛಾಯಾಗ್ರಹಕ ಉಮೇಶ್, ಜಿ ರಾಘವೇಂದ್ರ, ಎಸ್ ಎನ್ ರಾಜೇಶ್, ನಂಜುಂಡಿ, ರವಿಚಂದ್ರ, ನೀತು, ಮಂಜುನಾಥ್, ರವಿ, ಯತೀಶ್ ಬಾಬು, ಈಶ್ವರ್, ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular