ಚಿಕ್ಕಬಳ್ಳಾಪುರ: ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದ ಭಕ್ತರ ಟಿಟಿ ವಾಹನ ಭೀಕರ ಅಪಘಾತಕ್ಕೀಡಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಭಕ್ತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಘಟನೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯ ಸಮೀಪದ ಚೆನ್ನಾಮರ್ರಿ ಮಿಟ್ಟ ಬಳಿ ಸಂಭವಿಸಿದ್ದು, ಟಿಟಿ ವಾಹನಕ್ಕೆ ಅಪರಿಚಿತ ಬೃಹತ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮೃತರಾದವರು ಬಾಗೇಪಲ್ಲಿ ತಾಲೂಕಿನ ಮೇಘರ್ಷ್ (17), ಚರಣ್ (17) ಮತ್ತು ಶ್ರಾವಣಿ (28). ಇನ್ನು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮದನಪಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಅಪಘಾತದ ಮಾಹಿತಿ ತಿಳಿದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ತನಿಖೆ ಆರಂಭಿಸಿದ್ದಾರೆ.