Tuesday, July 1, 2025
Google search engine

Homeಅಪರಾಧಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಸಾವು; ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತಿಬ್ಬರು ಸಾವು; ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 40 ದಿನಗಳಲ್ಲಿ 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (38) ಹಾಗೂ ಚನ್ನರಾಯಪಟ್ಟಣದ ಕೆಂಬಾಳು ಗ್ರಾಮದ ಯೋಧ ಲೋಹಿತ್ (50) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಲೋಹಿತ್ ಜಮೀನಿನಲ್ಲಿ ಉಳುಮೆ ಮಾಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಮರಣರಾದರು. ಅವರು ಭಾರತೀಯ ಸೇನೆಯ ಯೋಧರಾಗಿದ್ದು, ಮುಂದಿನ ವರ್ಷ ನಿವೃತ್ತಿ ಹೊಂದಬೇಕಿತ್ತು. ಲೇಪಾಕ್ಷಿಗೆ ಎದೆ ನೋವು ಕಂಡು ತಕ್ಷಣ ಅವರು ಆಸ್ಪತ್ರೆಗೆ ಸಾಗಿಸಲಾದರೂ, ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಹೃದಯಾಘಾತದ ಈ ಮೇಲ್ಮಟ್ಟದ ಪ್ರಕರಣಗಳು ಜಿಲ್ಲೆಯಲ್ಲಿ ಆತಂಕ ಮೂಡಿಸಿವೆ.

ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

ಹಾಸನದಲ್ಲಿ ಹೃದಯಾಘಾತದಿಂದ 19 ಮಂದಿ ಯುವ ಜನತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನಿಖೆಗೆ ವಿಶೇಷ ಸಮಿತಿ ರಚಿಸಿದೆ. ಮೂರರಿಂದ ಐದು ಮಂದಿ ವೈದ್ಯರು ಇರುವ ತಂಡದಿಂದ ತನಿಖೆ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular