Tuesday, July 1, 2025
Google search engine

Homeರಾಜಕೀಯಐದು ವರ್ಷ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ: ಸಿಎಂ ಸಿದ್ದರಾಮಯ್ಯ

ಐದು ವರ್ಷ ಸರ್ಕಾರ ಬಂಡೆ ಥರ ಗಟ್ಟಿಯಾಗಿರುತ್ತೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾನು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಒಟ್ಟಾಗಿದ್ದೇವೆ. ನಮ್ಮ ನಡುವೆ ಭಿನ್ನಾಭಿಪ್ರಾಯವೇ ಇಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ ಬದಲಾಗುತ್ತಾರೆ ಎಂಬ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಆಧಾರವಿಲ್ಲದ ಮಾತು. ಸರಕಾರ ಬಲಿಷ್ಠವಾಗಿದೆ,” ಎಂದು ಹೇಳಿದರು. ಈ ವೇಳೆ ಡಿಸಿಎಂ ಕೈ ಹಿಡಿದು ಮೇಲಕ್ಕೆ ಎತ್ತಿ “ನಾವು ಒಗ್ಗಟ್ಟಾಗಿ ಇದ್ದೇವೆ” ಎಂದು ಸ್ಪಷ್ಟಪಡಿಸಿದರು.

ರಾಜ್ಯ ಉಸ್ತುವಾರಿ ಕಾರ್ಯದರ್ಶಿ ಸುರ್ಜೆವಾಲಾ ರಾಜ್ಯಕ್ಕೆ ಬಂದು ಶಾಸಕರ ಅಭಿಪ್ರಾಯ ಪಡೆದು ತಮ್ಮ ಕೆಲಸ ನಿರ್ವಹಿಸಲಿದ್ದಾರೆ ಎಂದರು.

ಬಿಜೆಪಿಯವರು ದಸರಾ ಉದ್ಘಾಟನೆ ಕುರಿತು ಸುಳ್ಳು ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿ, “ಶ್ರೀರಾಮುಲು ಚುನಾವಣೆಯಲ್ಲಿ ಸೋತವರು, ಅವರು ಹೇಗೆ ಭವಿಷ್ಯ ನುಡಿಯುತ್ತಾರೆ?” ಎಂದು ಪ್ರಶ್ನಿಸಿದರು.

RELATED ARTICLES
- Advertisment -
Google search engine

Most Popular