Monday, July 7, 2025
Google search engine

Homeರಾಜ್ಯಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆ; ಯೆಲ್ಲೋ...

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಪ್ರಕಟಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಹತ್ತುಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ತುಮಕೂರು, ವಿಜಯನಗರ, ರಾಮನಗರ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಆಗುಂಬೆ, ಸುಳ್ಯ, ಪುತ್ತೂರು, ಶೃಂಗೇರಿ, ಕಾರ್ಕಳ, ಹೊನ್ನಾವರ, ಜೋಯ್ಡಾ, ಮುಂಡಗೋಡು, ಕುಶಾಲನಗರ, ಬಂಟ್ವಾಳ, ಕೊಟ್ಟಿಗೆಹಾರ ಮೊದಲಾದೆಡೆ ಮಳೆಯಾಗಲಿದೆ.

ಮಹತ್ವದ ಸೂಚನೆಯಂತೆ, ಸಮುದ್ರದಲ್ಲಿ ಗಾಳಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಕಾರಣ ಮೀನುಗಾರರಿಗೆ ಸಮುದ್ರ ಪ್ರವೇಶವಿಲ್ಲದೆ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು ನಗರದ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠವಾಗಿದ್ದರೆ, ಕನಿಷ್ಠವು 20.5 ಡಿಗ್ರಿಯಷ್ಟಿದೆ. ಇತರ ಭಾಗಗಳಲ್ಲಿ ಹವಾಮಾನ ಈ ಕೆಳಗಿನಂತಿದೆ: ಮಂಗಳೂರು ಏರ್ಪೋರ್ಟ್‌ನಲ್ಲಿ ಗರಿಷ್ಠ 26.9°C, ಕಾರವಾರದಲ್ಲಿ 30.6°C, ಧಾರವಾಡದಲ್ಲಿ 27.4°C, ಬಾಗಲಕೋಟೆಯಲ್ಲಿ 31.0°C, ಕೊಪ್ಪಳದಲ್ಲಿ 32.3°C, ರಾಯಚೂರಿನಲ್ಲಿ 33.6°C ದಾಖಲಾಗಿದೆ.

RELATED ARTICLES
- Advertisment -
Google search engine

Most Popular