ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ. ಸಿ ರೋಡ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್. ಎ. ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.
