Tuesday, September 16, 2025
Google search engine

Homeರಾಜ್ಯವಿಪಕ್ಷ ಶಾಸಕರಿಗೂ ತಲಾ 25 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ವಿಪಕ್ಷ ಶಾಸಕರಿಗೂ ತಲಾ 25 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್

ಬೆಂಗಳೂರು: ವಿಪಕ್ಷ ಕ್ಷೇತ್ರಗಳಿಗೆ ಅನುದಾನ ನೀಡದ ಕಾರಣ ವಿರೋಧದಲ್ಲಿದ್ದ ಸಿಎಂ ಸಿದ್ದರಾಮಯ್ಯ, ಕೊನೆಗೂ ಎಲ್ಲ ಶಾಸಕರಿಗೂ ಸಮಾನವಾಗಿ ಅನುದಾನ ಬಿಡುಗಡೆ ಮಾಡಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ₹25 ಕೋಟಿ ಬಿಡುಗಡೆಗೆ ಸಿಎಂ ಒಪ್ಪಿಗೆ ನೀಡಿದ್ದಾರೆ.

ಈ ಅನುದಾನವನ್ನು ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆ ಮಾಡಲಾಗಿದ್ದು, ₹18.75 ಕೋಟಿ ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳಿಗೆ ಮೀಸಲಾಗಿದ್ದು, ಉಳಿದ ₹6.25 ಕೋಟಿ ವಿವೇಚನಾಧಿಕಾರದಡಿ ಇತರ ಕಾಮಗಾರಿಗಳಿಗೆ ವಿನಿಯೋಗಿಸಬಹುದಾಗಿದೆ.

ಈ ಹಿಂದೆ ಕಾಂಗ್ರೆಸ್ ಶಾಸಕರಿಗೆ ಮಾತ್ರ ₹50 ಕೋಟಿ ಅನುದಾನ ನೀಡಲಾಗಿತ್ತು, ಇದರಿಂದ ವಿಪಕ್ಷಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಎಲ್ಲ ಪಕ್ಷಗಳ ಶಾಸಕರಿಗೂ ಅನುದಾನ ನೀಡುವುದರಿಂದ ಸಮಾನತೆಯ ಭಾವನೆ ಬೆಳೆದಿದೆ.

RELATED ARTICLES
- Advertisment -
Google search engine

Most Popular