ವಿಜಯಪುರ : ವಿಜಯಪುರದಲ್ಲಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ 14 ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಿದ್ದಾರೆ. ವಿಜಯಪುರ ತಾಲೂಕಿನ ಅಂಕಲಿಗೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು.
ಜಾತ್ರೆಯ ವೇಳೆ ವಡ್ಡರ್ ಮತ್ತು ಪೂಜಾರಿ ಗುಂಪಿನ ನಡುವೆ ಗಲಾಟೆ ಆಗಿತ್ತು ಈ ವೇಳೆ ಪಿಸ್ತುಲ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು. ಏರ್ ಫೈರಿಂಗ್ ವೇಳೆ ಬಾಲಕಿಯ ತೊಡೆಗೆ ಗುಂಡು ತಗುಲಿ ಗಾಯವಾಗಿತ್ತು. ಆರೋಪಿಗಳನ್ನು ಸದ್ಯ ಪೋಲಿಸಲು ಅರೆಸ್ಟ್ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.