Monday, October 6, 2025
Google search engine

Homeರಾಜ್ಯಬೆಂಗಳೂರುದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ: ಹಸಿರು ಪಟಾಕಿಗೆ ಪ್ರೋತ್ಸಾಹ, ಭಾರಲೋಹ ಪಟಾಕಿಗೆ ನಿಷೇಧ

ಬೆಂಗಳೂರುದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ: ಹಸಿರು ಪಟಾಕಿಗೆ ಪ್ರೋತ್ಸಾಹ, ಭಾರಲೋಹ ಪಟಾಕಿಗೆ ನಿಷೇಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರ ಸ್ನೇಹಿ ವಾಹನಗಳಿಗೆ ಚಾಲನೆ ನೀಡಿದರು. ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಸಕ ನರೇಂದ್ರಸ್ವಾಮಿ ಅವರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡದಂತೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡುವಂತೆ ಪಟಾಕಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಬೇಕು. ಹಾಗೆಯೇ ಭಾರಲೋಹಯುಕ್ತ ರಾಸಾಯನಿಕ ಪಟಾಕಿ ಮಾರಾಟ ಮಾಡುವವರ ಪರವಾನಗಿ ರದ್ದುಪಡಿಸಲು ಕ್ರಮ ವಹಿಸುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದರು.

15 ವರ್ಷ ಪೂರೈಸಿದ ಡಿಸೆಲ್ ವಾಹನಗಳನ್ನು ಬಳಕೆ ಮಾಡುವಂತಿಲ್ಲ. ಅದನ್ನು ಸ್ಕ್ರ್ಯಾಪ್ ನೀತಿಯಂತೆ ಬಳಕೆಯಿಂದ ದೂರವಿಡಬೇಕು. ಮಂಡಳಿಯಲ್ಲಿ ವಾಹನಗಳ ಕೊರತೆಯಿಂದ ಏಕ ಬಳಕೆ ಪ್ಲಾಸ್ಟಿಕ್, ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ವಿಲೇವಾರಿ ಘಟಕಗಳ ಮೇಲೆ ನಿಗಾ ಇಡಲು ಮತ್ತು ಏಕ ಬಳಕೆ ಪ್ಲಾಸ್ಟಿಕ್ ತಯಾರಿಕಾ ಘಟಕ, ಮಳಿಗೆಗಳ ತಪಾಸಣೆ, ಪರಿಶೀಲನೆ ಮಾಡಲು, ಜಲ ಮೂಲಗಳ ಗುಣಮಟ್ಟ ಪರೀಕ್ಷೆ ಮಾಡಲು ಅಡ್ಡಿಯಾಗುತ್ತಿತ್ತು. ಈ ನಿಟ್ಟಿನಲ್ಲಿ 68 ಇವಿ ವಾಹನಗಳಿಗೆ ಮಂಡಳಿ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಈ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು, ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಪರಿಸರ ಸಂರಕ್ಷಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಮಂಡಳಿಯ ಅಧಿಕಾರಿಗಳಿಗೆ ಈಶ್ವರ ಖಂಡ್ರೆ ತಿಳಿಸಿದರು.

RELATED ARTICLES
- Advertisment -
Google search engine

Most Popular