ಮಂಗಳೂರು (ದಕ್ಷಿಣ ಕನ್ನಡ) : ಮಂಗಳೂರು ನಗರದ ನಂತೂರು ಜಂಕ್ಷನ್ನಲ್ಲಿ ಅಕ್ಟೋಬರ್ 2ರಂದು ರಾತ್ರಿ ಮದ್ಯ ಸೇವಿಸಿ ಕಾರು ಚಲಾಯಿಸಿ ಪೊಲೀಸ್ ಜೊತೆಗೆ ದುರ್ವರ್ತನೆ ತೋರಿದ್ದ ಆರೋಪಿ ಶಿವಪ್ರಸಾದ್ ಕರ್ಕೇರ ಎಂಬಾತ ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣದ ಮೂರನೇ ಆರೋಪಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೌಡಿಶೀಟರ್ ಕೂಡ ಆಗಿರುವ ಈತ ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ. ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೆಬಲ್ ತಡೆದು ನಿಲ್ಲಿಸಲು ಯತ್ನಿಸಿದಾಗ ನಿಲ್ಲಿಸಿರಲಿಲ್ಲ. ಈ ವೇಳೆ ಕಾನ್ಸ್ಟೆಬಲ್ ತನ್ನ ಮೊಬೈಲ್ನಿಂದ ಕಾರಿನ ಹಿಂಭಾಗಕ್ಕೆ ಬಡಿದ ಪರಿಣಾಮ ಕಾರಿನ ಗಾಜು ಒಡೆದಿತ್ತು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಯಾಗಿತ್ತು.