ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ತಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಅಕ್ಟೋಬರ್ 30ರಂದು ಕಲಂ 35(3) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಂತೆ 2023 ಅಡಿಯಲ್ಲಿ ವಿಚಾರಣೆಗೆ ಹಾಜರಾಗಲು ಇವರ ಮನೆಗೆ ನೋಟೀಸ್ ಜಾರಿ ಮಾಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಪ್ರಭಾಕರ ಭಟ್ ವಿರುದ್ದ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿತ್ತು.



                                    