Friday, November 28, 2025
Google search engine

Homeರಾಜ್ಯಸುದ್ದಿಜಾಲಬೆಂಗಳೂರಿಗರಿಗೆ ಗುಡ್ ನ್ಯೂಸ್ : ನೀರಿನ‌ ಬಿಲ್ ಬಾಕಿ ಉಳಿಸಿಕೊಂಡಿರುವವರು ಅಸಲು ಕಟ್ಟಿದರೆ ಸಾಕು

ಬೆಂಗಳೂರಿಗರಿಗೆ ಗುಡ್ ನ್ಯೂಸ್ : ನೀರಿನ‌ ಬಿಲ್ ಬಾಕಿ ಉಳಿಸಿಕೊಂಡಿರುವವರು ಅಸಲು ಕಟ್ಟಿದರೆ ಸಾಕು

ಬೆಂಗಳೂರು: ಬೆಂಗಳೂರಲ್ಲಿ ನೀರಿನ ಬಿಲ್ ಕಟ್ಟದೇ ಬಾಕಿ ಉಳಿಸಿಕೊಂಡ ಗ್ರಾಹಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಒನ್ ಟೈಂ ಪಾವತಿಗೆ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಹಾಗೂ ಬಡ್ಡಿ ದಂಡ, ಇತರೆ ಶುಲ್ಕವನ್ನು ಶೇ.100 ರಷ್ಟು ಮನ್ನಾ ಮಾಡುವುದಾಗಿ ತಿಳಿಸಿದೆ. ಗುರುವಾರ(ನ.27) ನಡೆದ ಸಚಿವ ಸಂಪುಟ ಸಭೆಯಲ್ಲಿ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ನೀರಿನ ಬಾಕಿ ಅಸಲು ಮೊತ್ತವನ್ನು ಪಾವತಿಸಿದರೆ ಬಡ್ಡಿ, ದಂಡ ಮತ್ತು ಇತರೆ ಶುಲ್ಕಗಳನ್ನು ಶೇ.100ರಷ್ಟು ಮನ್ನಾ ಮಾಡುವ ಏಕಕಾಲಿಕ ತೀರುವಳಿ ಯೋಜನೆಗೆ ಅನುಮೋದನೆ ನೀಡಿದೆ.

3 ತಿಂಗಳ ಅವಧಿಗೆ ಏಕಕಾಲಿಕ ತೀರುವಳಿ ಯೋಜನೆ ಜಾರಿ ಮಾಡಲು ತೀರ್ಮಾನ ಮಾಡಲಾಗಿದ್ದು, ಬೆಂಗಳೂರು ನೀರು ಸರಬರಾಜು ನಿಯಮದ ಪ್ರಕಾರ, 1965ರ ನಿಯಮಾವಳಿಗಳನ್ನು ಸಡಿಲಿಸಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಗ್ರಾಹಕರು ಪಾವತಿಸಲು ಬಾಕಿಯಿರುವ ನೀರಿನ ಬಿಲ್ಲಿನ ಸಂಬಂಧ ಏಕಕಾಲಿಕ ಸೆಟಲ್‌ಮೆಂಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಬಾಕಿಯಿರುವ ಮೊತ್ತಗಳನ್ನು ಲೆಕ್ಕ ಪತ್ರದಲ್ಲಿ ಸಮನ್ವಯಗೊಳಿಸಲು ಸಚಿವ ಸಂಪುಟ ನಿರ್ಣಯಿಸಿದೆ.‌ ಫೆಬ್ರವರಿ 2025ರ ವರೆಗೆ ಗ್ರಾಹಕರು ಉಳಿಸಿಕೊಂಡಿರುವ ನೀರಿನ ಬಾಕಿ ಮೊತ್ತವು ಒಟ್ಟು 701.71 ಕೋಟಿ ರೂ.ಗಳಿದ್ದು, ಈ ಮೊತ್ತದಲ್ಲಿ ಅಸಲು ಮೊತ್ತವು 439.03 ಕೋಟಿ ರೂ.ಗಳು ಹಾಗೂ ಬಾಕಿಯಿರುವ ಬಡ್ಡಿ ಮೊತ್ತವು 262.68 ಕೋಟಿ ರೂ.ಗಳಾಗಿದೆ. ಈ ಯೋಜನೆಗೆ 3 ತಿಂಗಳ ಕಾಲಮಿತಿ ನಿಗದಿಗೊಳಿಸಿ. ಏಕಕಾಲಿಕ ಸೆಟಲ್‌ಮೆಂಟ್ ಯೋಜನೆಯನ್ನು ಕಾರ್ಯಗತಗೊಳಿಸಿದೆ.

ಇನ್ನೂ ಗ್ರಾಹಕರಿಂದ ಬಾಕಿಯಿರುವ ನೀರಿನ ಅಸಲು ಬಿಲ್ಲಿನ ಮೊತ್ತವನ್ನು ಪಾವತಿಸಿಕೊಳ್ಳುವುದರಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢಿಕರಿಸಬಹುದಾಗಿದ್ದು, ಸಾರ್ವಜನಿಕರಿಗೂ ಸಹ ಅಸಲು ಮೊತ್ತದ ಮೇಲಿನ ಬಡ್ಡಿ ಕಟ್ಟುವುದರಿಂದ ವಿನಾಯಿತಿ ದೊರಕಲಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಅಂದಾಜು 100 ಕೋಟಿ ರೂ.ಗಳ ವೆಚ್ಚದಲ್ಲಿ ಭೂಭರ್ತಿ ತಾಣಗಳ ಕಾರ್ಯಾಚರಣೆ ಮತ್ತು ನಿರ್ವಹಣೆ ಪ್ಯಾಕೇಜ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಂಪುಟ ಅನುಮೋದನೆ ನೀಡಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular