Friday, December 5, 2025
Google search engine

Homeರಾಜಕೀಯಸಂಕ್ರಾಂತಿ ಎಳ್ಳು ಬೆಲ್ಲದ ಸಿಹಿ ಸುದ್ದಿಯಲ್ಲಿ ಡಿಕೆಶಿ..?

ಸಂಕ್ರಾಂತಿ ಎಳ್ಳು ಬೆಲ್ಲದ ಸಿಹಿ ಸುದ್ದಿಯಲ್ಲಿ ಡಿಕೆಶಿ..?

ಬೆಂಗಳೂರು : ಸಂಕ್ರಾಂತಿಯ ವೇಳೆಗೆ ಶುಭ ಸುದ್ದಿ ದೊರೆಯಲಿದೆ ಎಂಬ ವಿಶ್ವಾಸದಲ್ಲಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಬಣದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನದಲ್ಲಿದ್ದಾರೆ. ಈ ವೇಳೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರನ್ನು ನಿನ್ನೆ ಮತ್ತೊಮೆ ಭೇಟಿಯಾಗಿ ಮನವೋಲಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಅಧಿಕಾರ ಹಂಚಿಕೆಯ ಗೊಂದಲದಲ್ಲಿ ಸತೀಶ್ ಜಾರಕಿಹೊಳಿ ಕೇಂದ್ರ ಬಿಂದುವಾಗಿದ್ದು, ಸಿದ್ದರಾಮಯ್ಯ ಅವರ ಬಣದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿದ್ದಾರೆ.

ಇನ್ನೂ ಪದೇ ಪದೇ ಸಚಿವರ, ಶಾಸಕರ ಭೋಜನ ಕೂಟಗಳ ಮೂಲಕ ಸಿದ್ದರಾಮಯ್ಯ ಮುಂದಾಳಾಗಿದ್ದು, ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆನೆ ಬಲ ಎಂದೇ ಬಿಂಬಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್, ಸತೀಶ್ ಜಾರಕಿಹೊಳಿಯವರನ್ನು ಎರಡನೇ ಬಾರಿಗೆ ಭೇಟಿಯಾಗಿರುವುದು ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ತನ್ಮೂಲಕ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮರಳಿ ಅಧಿಕಾರಕ್ಕೆ ಬಂದರೆ ತಾವು ಮುಖ್ಯಮಂತ್ರಿಯಾಗುವುದಾಗಿ ಪದೇ ಪದೇ ಹೇಳುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಭೇಟಿಯ ಬಳಿಕವೂ ಸತೀಶ್ ಜಾರಕಿಹೊಳಿ ತಮ ನಾಯಕತ್ವದ ನಿಷ್ಠೆ ಬದಲಾಯಿಸಿಲ್ಲದೇ ಇರುವುದು ಸಿದ್ದರಾಮಯ್ಯ ಅವರನ್ನು ಬಿಟ್ಟು ತಾವು ಬರುವುದಿಲ್ಲ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ಇತ್ತ ಡಿ.ಕೆ.ಶಿವಕುಮಾರ್ ತಮ್ಮ ಪ್ರಯತ್ನವನ್ನು ಬಿಟ್ಟು ಬಿಡದೆ ಮಾಡುತ್ತಿದ್ದಾರೆ. ಈ ಬಗ್ಗೆ ನೆನ್ನೆ ರಾತ್ರಿ ಇಬ್ಬರು ನಾಯಕರು ಭೇಟಿಯಾಗುವ ಮೂಲಕ ಸುದೀರ್ಘ ಮಾತುಕತೆ ನಡೆಸಿದು, ಮೂಲಗಳ ಪ್ರಕಾರ ಜನವರಿಯ ವೇಳೆಗೆ ನಾಯಕತ್ವ ಬದಲಾವಣೆಯಾಗಲಿದೆ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಮಣೆ ಹಾಕಲಿದೆ ಎಂಬ ವದ್ಧಂತಿಗಳಿವೆ. ಈ ನಿಟ್ಟಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಸತತ ಪ್ರಯತ್ನಗಳು ಮುಂದುವರೆದಿವೆ ಎನ್ನಲಾಗುತ್ತಿದೆ.

RELATED ARTICLES
- Advertisment -
Google search engine

Most Popular