ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 11 ರಂದು ಚುನಾವಣೆ ಮತ್ತು ಡಿಸೆಂಬರ್ 13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿದ್ದು, ಗಡಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ಬಾರ್ಗಳನ್ನು ಡಿಸೆಂಬರ್ 9 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 11 ರ ಸಂಜೆ 6 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿಸೆಂಬರ್ 12 ರಂದು ಮಧ್ಯರಾತ್ರಿ 12 ಗಂಟೆಯಿಂದ ದಿನಾಂಕ: 13 ರ ಮಧ್ಯರಾತ್ರಿ 12 ಗಂಟೆಯ ತನಕ ಮುಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ.
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮದ್ಯದಂಗಡಿ ಮುಚ್ಚಲು ಆದೇಶ
RELATED ARTICLES



